ಉಡುಪಿ: ಮಹಾ ಶಿವರಾತ್ರಿಯ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮುರ್ಡೇಶ್ವರ ಸನ್ನಿದಾನದಲ್ಲಿ ವಿಶೇಷ ಸ್ಯಾಂಡ್ ಆರ್ಟ್ ರಚಿಸಲಾಗಿದೆ.
ಶಿವರಾತ್ರಿಯ ಪ್ರಯುಕ್ತ ನಡೆಯುತ್ತಿರುವ ವಿಶೇಷ ಪ್ರದರ್ಶನ ಪ್ರದರ್ಶನ ದಲ್ಲಿ “ಓಂ ನಮಃ ಶಿವಾಯ” ಎಂಬ ಮಂತ್ರ ಧೈಯದೊಂದಿಗೆ ಕಲಾಕೃತಿಯೊಂದನ್ನು ರಚಿಸಲಾಗಿದೆ. ಉಡುಪಿಯ ‘ಸ್ಯಾಂಡ್ ಥೀಮ್’ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್. ಅವರಿಂದ ರಚಿತಗೊಂಡ ಮರಳು ಶಿಲ್ಪಾಕೃತಿ ಎಲ್ಲರ ಮೆಚ್ಚುಗೆ ಪಡೆದಿದೆ.