News Karnataka Kannada
Thursday, May 02 2024
ಉಡುಪಿ

ಸಂಗೀತ ರಸಮಂಜರಿ: ರಘುಪತಿ ಭಟ್, ವಿಜಯ ಪ್ರಕಾಶ್ ಜುಗಲ್ ಬಂಧಿಗೆ ಪ್ರೇಕ್ಷಕರು ಪಿಧಾ

Udu
Photo Credit : News Kannada

ಉಡುಪಿ: ಮಾಜಿ ಪ್ರಧಾನಿ ಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಪ್ರಯುಕ್ತ ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು‌.

ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರೊಂದಿಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅವರು “ಬಾನಿಗೊಂದು ಎಲ್ಲೆ ಎಲ್ಲಿದೆ” ಹಾಡಿಗೆ ಧ್ವನಿಗೂಡಿಸುವ ಮೂಲಕ‌ ನೆರೆದಿದ್ದ ಸಾವಿರಾರು ಪ್ರೇಕ್ಷಕರನ್ನು ರಂಜಿಸಿದರು. ಶಾಸಕ ರಘುಪತಿ ಭಟ್ ಹಾಗೂ ವಿಜಯ ಪ್ರಕಾಶ್ ಅವರ ಜುಗಲ್ ಬಂಧಿಗೆ ಪ್ರೇಕ್ಷಕರು ಶಿಳ್ಯೆ, ಚಪ್ಪಾಳೆ ಮೂಲಕ ಹುರಿದುಂಬಿಸಿದರು.

ನಗರದಲ್ಲಿ‌ ಹಡಿಲು ಭೂಮಿ‌ ಕೃಷಿ ಯೋಜನೆಗೆ ಗಾಯಕ ವಿಜಯಪ್ರಕಾಶ್ ಮೆಚ್ಚುಗೆ

ಕೇದಾರೋತ್ಥಾನ ಟ್ರಸ್ಟ್ ಮೂಲಕ‌ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ‌ ಉಡುಪಿ ವಿಧಾನಸಭಾ‌ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಹಡಿಲು ಭೂಮಿ‌ ಕೃಷಿ ಯೋಜನೆಯ ಬಗ್ಗೆ ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ರಘುಪತಿ ಭಟ್ ಅವರು ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಹಡಿಲು ಭೂಮಿ‌ ಕೃಷಿ ಯೋಜನೆಯನ್ನು ಕಾರ್ಯಗತಗೊಳಿಸುವ ಮೂಲಕ‌ ಯಾವುದೇ ಭೂಮಿ ವ್ಯರ್ಥ ಅಲ್ಲ. ಸಾಧಿಸುವ ಚಲ ಇದ್ದರೆ, ಮರುಭೂಮಿಯಲ್ಲೂ ಕೃಷಿ ಮಾಡಬಹುದು ಎಂಬುವುದನ್ನು ತಿಳಿಸಿಕೊಟ್ಟಿದ್ದಾರೆ. ಶಾಲಾ ಮಕ್ಕಳನ್ನು ಹಡಿಲು ಭೂಮಿ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರಿಗೂ ಕೃಷಿಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು