ಉಡುಪಿ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಸದ್ಯ ತಲೆಮರೆಸಿಕೊಂಡಿರುವ ಕುಖ್ಯಾತ ಡೀಲರ್ ಸ್ಯಾಂಟ್ರೋ ರವಿ’ ಉಡುಪಿ ಜಿಲ್ಲೆಗೂ ಭೇಟಿ ನೀಡಿದ್ದನು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಪೊಲೀಸರು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿಗೆ ಆಗಮಿಸಿ ತನಿಖೆ ನಡೆಸಿದ್ದಾರೆ ಎನ್ನಲಾಗಿದೆ.
ಹೆಬ್ರಿಯಿಂದ ಆಗುಂಬೆ ತೆರಳುವ ರಸ್ತೆಯಲ್ಲಿರುವ ಗೂಡಂಗಡಿಯೊಂದಕ್ಕೆ ಭೇಟಿ ನೀಡಿದ ರವಿ, ಗೂಡಂಗಡಿ ಮಾಲೀಕ ಹೆಬ್ರಿಯ ರಮೇಶ್ ಕುಲಾಲ್ ಅವರ ಬಳಿ ಮೊಬೈಲ್ ಪಡೆದು ಯಾರಿಗೋ ಕರೆ ಮಾಡಿದ್ದ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಮೈಸೂರಿನ ಪೊಲೀಸರು ರಮೇಶ್ ಕುಲಾಲ್ ವಿಚಾರಣೆ ನಡೆಸಿದ್ದು, ಆತನ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.