News Karnataka Kannada
Friday, May 03 2024
ಉಡುಪಿ

ಬಿಜೆಪಿ ಹಿರಿಯ ನಾಯಕ ಸೋಮಶೇಖರ ಭಟ್ ಅಂತ್ಯಕ್ರಿಯೆ: ಗಣ್ಯರಿಂದ ಅಂತಿಮ ದರ್ಶನ

ಬಿಜೆಪಿ ಹಿರಿಯ ನಾಯಕ, ಆರ್.ಎಸ್.ಎಸ್ ಮುಂದಾಳು, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ಅವರ ಅಂತಿಮ ದರ್ಶನ ಇಂದು ಮಧ್ಯಾಹ್ನ ಕಾಡುಬೆಟ್ಟುವಿನ ಅವರ ನಿವಾಸ 'ನಲಂದ'ದಲ್ಲಿ ನಡೆಯಿತು. ಬಳಿಕ ಉಡುಪಿ ಬೀಡಿನಗುಡ್ಡೆ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ಜರಗಿತು.
Photo Credit : News Kannada

ಉಡುಪಿ: ಬಿಜೆಪಿ ಹಿರಿಯ ನಾಯಕ, ಆರ್.ಎಸ್.ಎಸ್ ಮುಂದಾಳು, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ಅವರ ಅಂತಿಮ ದರ್ಶನ ಇಂದು ಮಧ್ಯಾಹ್ನ ಕಾಡುಬೆಟ್ಟುವಿನ ಅವರ ನಿವಾಸ ‘ನಲಂದ’ದಲ್ಲಿ ನಡೆಯಿತು. ಬಳಿಕ ಉಡುಪಿ ಬೀಡಿನಗುಡ್ಡೆ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ಜರಗಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ದಾ.ಮ. ರವೀಂದ್ರ, ಮಾನ್ಯ ವಿಭಾಗ ಸಂಘ ಚಾಲಕ ನಾರಾಯಣ ಶೆಣೈ ಸಹಿತ ಸಂಘ ಪ್ರಮುಖರು, ಮಾಜಿ ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಭಜರಂಗದಳದ ಪ್ರಮುಖರಾದ ಸುನಿಲ್ ಕೆ.ಆರ್., ದಿನೇಶ್ ಮೆಂಡನ್ ಸಹಿತ ಬಿಜೆಪಿ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹಿತೈಷಿ-ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು