ಕಾರ್ಕಳ: ನಗರದ ಕ್ರೈಸ್ಟ್ ಕಿಂಗ್ ಚಚ್೯ ಮುಂಭಾಗದ ಗಾಂಧಿ ಮೈದಾನದ ರಸ್ತೆಯ ಚರಂಡಿ ಹಾಗೂ ರಸ್ತೆಯಲ್ಲಿ ಕೊಳಚೆ ನೀರು ಹರಿದು ಹೋಗುತ್ತಿದ್ದು, ಪರಿಸರದಲ್ಲಿ ಗಬ್ಬುನಾತ ಬೀರಲು ಕಾರಣವಾಗಿದೆ.
ಆಗಸ್ಟ್ 15ರ ಪ್ರಯುಕ್ತ ಗಾಂಧಿಮೈದಾನದಲ್ಲಿ ಜರಗಲಿರುವ ಸ್ವಾತಂತ್ರ್ಯೋತ್ಸವ ಪ್ರಯುಕ್ತವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಲು ಕೆಲವೇ ಗಂಟೆಗಳು ಬಾಕಿ ಉಳಿದಿದೆ.
ರಾಷ್ಟ್ರೀಯ ಹಬ್ಬಗಳ ಸಮಿತಿಯ ಆಶ್ರಯದಲ್ಲಿ ಈ ಮಹತ್ವದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ನಾಗರಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಕಳ ಪುರಸಭಾ ಆಡಳಿತ ವರ್ಗವು ಕೂಡಲೇ ಕ್ರಮ ಕೈಗೊಳ್ಳಬೇಕಾಗಿ ನಾಗರಿಕರು ಆಗ್ರಹಿಸಿದ್ದಾರೆ.