ಶಂಕರಪುರ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಂಕರಪುರದಲ್ಲಿ ನಡೆದಿದೆ.
ಮನೆಯಂಗಳದಲ್ಲಿ ಎಲೆಕ್ಟ್ರಿಕಲ್ ಸ್ಕೂಟರ್ ನಿಲ್ಲಿಸಲಾಗಿತ್ತು. ಮನೆಯವರು ನೋಡು ನೋಡುತ್ತಿದ್ದಂತೆ ಸ್ಕೂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸ್ಕೂಟರ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಮನೆಯಂಗಳದಲ್ಲಿ ದಟ್ಟ ಹೊಗೆ ಆವರಿಸಿತ್ತು. ಬೆಂಕಿಯ ಕೆನ್ನಾಲಿಗೆಗೆ ಮನೆಯಂಗಳದಲ್ಲಿ ಗೂಡಿನಲ್ಲಿದ್ದ ಏಳು ಪಕ್ಷಿಗಳು ಸಾವನ್ನಪ್ಪಿದೆ. ಕೃಷಿ ಯಂತ್ರ, ಪಂಪ್ ಸೆಟ್ ಸಹಿತ ವಿವಿಧ ಉಪಕರಣಗಳಿಗೆ ಹಾನಿಯಾಗಿದ್ದು, ಅಂದಾಜು ಮೂರು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.