ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಹಾಗೂ ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದ ಆರೋಪಿಗಳ ಜೊತೆ ಲಿಂಕ್ ಇರುವ ಶಂಕೆಯ ಮೇರೆಗೆ ಎನ್ಐಎ ತನಿಖಾ ತಂಡ ಉಡುಪಿ ಜೆಲ್ಲೆಯ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿಯ ಪ್ಲ್ಯಾಟ್ ವೊಂದಕ್ಕೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಉಡುಪಿ ಕಾಲೇಜೊಂದರ ಪ್ರಾಧ್ಯಾಪಕಿಯ ಪುತ್ರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿ, ಬ್ರಹ್ಮಾವರ ನಿವಾಸಿ ರಿಹಾನ್ ಶೇಖ್ ಎಂಬಾತನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಲ್ಲದೆ, ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ರಿಹಾನ್ ಗೆ ಸಂಬಂಧಿಸಿದ ಫ್ಲಾಟ್ ನಲ್ಲಿ ಶೋಧ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎನ್ ಐಎ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ರಿಹಾನ್ ಕುಟುಂಬಸ್ಥರ ವಿಚಾರಣೆ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಶಂಕಿತ ಯುವಕನನ್ನು ಬೆಂಗಳೂರಿಗೆ ಎನ್ ಐ ಎ ತಂಡ ಕರೆದೊಯ್ಯಲಿದೆ ಎಂದು ಹೇಳಲಾಗಿದೆ.