ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಸಂಭ್ರಮ ಸಮಾರಂಭವು ಡಿ.18 ರಂದು ಬೆಳಿಗ್ಗೆ 10.30 ಕ್ಕೆ ಉಡುಪಿಯ ಶೋಕ ಮಾತಾ ಇಗರ್ಜಿ ಚರ್ಚ್ ನ ಆವೆ ಮರಿಯಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷ ಅಲೋಷಿಯಸ್ ಡಿ’ಅಲ್ಮೇಡಾ ಅವರು ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಲಿದ್ದಾರೆ. ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಆಲೋಷಿಯಸ್ ಡಿ’ಅಲ್ಮೇಡಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ಆಶಿರ್ವಚನ ನೀಡಲಿದ್ದಾರೆ ಎಂದರು.
ಮಿಲಾಗ್ರಿಸ್ ಕೆಥೆಡ್ರಲ್ ಕಲ್ಯಾಣಪುರ ಚರ್ಚ್ ನ ವಲೇರಿಯನ್ ಮೆಂಡೋನ್ಸಾ, ಉಡುಪಿ ಶೋಕಮಾತಾ ಇಗರ್ಜಿ ಚರ್ಚ್ನ ಧರ್ಮಗುರು ಚಾರ್ಲ್ಸ್ ಮಿನೇಜಸ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಲೂವಿಸ್ ಲೋಬೋ, ಪ್ರಧಾನ ವ್ಯವಸ್ಥಾಪಕ ಸಂದೀಪ್ ಎ. ಫೆರ್ನಾಂಡಿಸ್ , ಫೆಲಿಕ್ಸ್ ಪಿಂಟೋ, ಇಗ್ನೇಷಿಯಸ್ ಮೊನಿಸ್ ಉಪಸ್ಥಿತರಿದ್ದರು.