ಕುಂದಾಪುರ: ಸಂಕೀರ್ತನ ಮಂದಾರ್ತಿ ಅವರು ಏರ್ಪಡಿಸಿದ ರಾಷ್ಟ್ರೀಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಶ್ರೀ ಮಾಣಿ ಸಿದ್ದಲಿಂಗೇಶ್ವರ ಭಜನಾ ಮಂಡಳಿ ಮೊವಾಡಿ ತಂಡದವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಸಂಕೀರ್ತನ ಮಂದಾರ್ತಿ ಅವರು ಆಯೋಜಿಸಿದ ರಾಷ್ಟ್ರೀಯ ಮಟ್ಟದ ಭಜನಾ ಕುಣಿತ ಸ್ಪರ್ಧೆಯಲ್ಲಿ 108 ಭಜನಾ ಮಂಡಳಿಗಳ ತಂಡಗಳು ಭಾಗವಹಿಸಿದ್ದವು.
ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ನೀರ್ಕರೆ ತೆಂಕಮಿಜಾರು ಮೂಡುಬಿದಿರೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.