News Karnataka Kannada
Monday, May 06 2024
ಉಡುಪಿ

ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಮುಖ್ಯಮಂತ್ರಿಗೆ ಮನವಿ

Sri Ram Sene urges CM to re-investigate Soujanya rape and murder case
Photo Credit : News Kannada

ಉಡುಪಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು 11 ವರ್ಷಗಳಾದರೂ ಇನ್ನೂ ನ್ಯಾಯ ಸಿಕ್ಕಿಲ್ಲ. ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಸಾಕಷ್ಟು ಹೋರಾಟಗಳು, ಪ್ರತಿಭಟನೆಗಳು, ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಮೌನಕ್ಕೆ ಶರಣಾಗಿರುವುದು ಖಂಡನೀಯ ಎಂದು ಶ್ರೀರಾಮಸೇನೆ ತಿಳಿಸಿದೆ.

ರಾಜ್ಯ ಸರ್ಕಾರ ಸೌಜನ್ಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಅಥವಾ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ಮರುತನಿಖೆ ನಡೆಸಬೇಕು. ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಸರ್ಕಾರಿ ವೈದ್ಯರು, ಪೊಲೀಸ್ ತನಿಖಾಧಿಕಾರಿ ಹಾಗೂ ಸಂಬಂಧ ಪಟ್ಟ ಕರ್ತವ್ಯಲೋಪ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆಗೆ ಒಳಪಡಿಸಬೇಕು.
ಸೌಜನ್ಯಳ ಕುಟುಂಬಕ್ಕೆ ಹಾಗೂ ಮಾಡದ ತಪ್ಪಿಗೆ 6 ವರ್ಷ ಜೈಲು ಶಿಕ್ಷೆ ಅನುಭವಿಸಿ ನಿರಪರಾಧಿ ಆದ ಸಂತೋಷ ರಾವ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ನೀಡಬೇಕು, ಸೌಜನ್ಯ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮಸೇನೆ

ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ಜಿಲ್ಲಾ ಮುಖಂಡರಾದ ಶರತ್ ಮಣಿಪಾಲ, ಸುಜಿತ್ ನಿಟ್ಟೂರು, ಸುದೀಪ್ ಪೂಜಾರಿ, ಕೀರ್ತಿರಾಜ್ ಕಿದಿಯೂರು, ಪ್ರಕಾಶ್ ಹೆಗ್ಡೆ, ಸಂತೋಷ್ ರಾಜ್  ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು