News Karnataka Kannada
Thursday, May 02 2024
ಉಡುಪಿ

ಎಸ್.ಎಸ್.ಎಲ್.ಸಿ ಪರೀಕ್ಷೆ: 95 ಮಂದಿ ಗೈರು

ಜಿಲ್ಲೆಯಾದ್ಯಂತ ಸೋಮವಾರದಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.
Photo Credit : NewsKarnataka

ಉಡುಪಿ: ಜಿಲ್ಲೆಯಾದ್ಯಂತ ಸೋಮವಾರದಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಮೊದಲನೇ ದಿನವಾದ ಸೋಮವಾರದಂದು ಕನ್ನಡ ಭಾಷಾ ಪರೀಕ್ಷೆ ದಿನದಂದು ನಗರದ ಮಣಿಪಾಲ ಜೂನಿಯರ್ ಕಾಲೇಜಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟು 13,701 ಜನ ಪರೀಕ್ಷೆ ನೊಂದಾಯಿಸಿದ್ದು, ಅವರಲ್ಲಿ 13606 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 95 ಮಂದಿ ಗೈರು ಹಾಜರಾಗಿರುತ್ತಾರೆ.

ಬೈಂದೂರು ತಾಲೂಕಿನಲ್ಲಿ ಒಟ್ಟು 2055 ವಿದ್ಯಾರ್ಥಿಗಳು ನೋಂದಾಯಿಸಿ, 2046 ಹಾಜರಾಗಿ, 9 ವಿದ್ಯಾರ್ಥಿಗಳು ಗೈರಾಗಿರುತ್ತಾರೆ. ಕುಂದಾಪುರ ತಾಲೂಕಿನಲ್ಲಿ 2683 ವಿದ್ಯಾರ್ಥಿಗಳು ನೋಂದಾಯಿಸಿದ್ದು, 2666 ಪರೀಕ್ಷೆಗೆ ಹಾಜರಾಗಿ, 17 ಮಂದಿ ಗೈರು, ಕಾರ್ಕಳ ತಾಲೂಕಿನಲ್ಲಿ 2675 ಮಂದಿ ಪರೀಕ್ಷೆಗೆ ನೋಂದಾಯಿಸಿ, 2657 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 18 ಜನ ಗೈರು, ಬ್ರಹ್ಮಾವರ ತಾಲೂಕಿನಲ್ಲಿ 2759 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, 2727 ಮಂದಿ ಪರೀಕ್ಷೆ ಬರೆದಿದ್ದು, 32 ಜನ ಗೈರು ಹಾಗೂ ಉಡುಪಿ ತಾಲೂಕಿನಲ್ಲಿ 3529 ಮಂದಿ ಪರೀಕ್ಷೆಗೆ ನೋಂದಾಯಿಸಿ, 3510 ಜನ ಹಾಜರಾಗಿ, 19 ಗೈರುರಾಗಿರುತ್ತಾರೆ.

ಈ ಸಂದರ್ಭದಲ್ಲಿ ನಿಟ್ಟೂರು ಹೈಸ್ಕೂಲ್‌ನ ಮಾನಸಿಕ ವಿಕಲಚೇತನ ವಿದ್ಯಾರ್ಥಿನಿ ಮಧು ಕಂಕನವಾಡಿ ಪರವಾಗಿ 9 ನೇತರಗತಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಪರೀಕ್ಷೆ ಬರೆದರೆ, ನಿನ್ನೆಯಷ್ಟೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದ ಪರ್ಕಳ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವಿದ್ಯಾರ್ಥಿನಿ ಭವಿಷ್ಯ ಅವರು ಸ್ತುತಿ ಶೆಟ್ಟಿ ಸಹಾಯದಿಂದ ಪರೀಕ್ಷೆ ಬರೆದಿದ್ದು, ವಿಶೇಷವಾಗಿತ್ತು. ಇವರನ್ನು ಜಿಲ್ಲಾಧಿಕಾರಿಗಳಾದ ಡಾ. ಕೆ ವಿದ್ಯಾಕುಮಾರಿ ವೀಕ್ಷಿಸಿ, ಶುಭ ಹಾರೈಸುವುದರ ಜೊತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಿಡಿಪಿಐ ಗಣಪತಿ, ಶಿಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು