News Karnataka Kannada
Sunday, May 12 2024
ಉಡುಪಿ

ಗ್ರಾಮೀಣ, ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ ಆರಂಭಿಸಿ: ರಮೇಶ್ ಕಾಂಚನ್ ಮನವಿ

In-charge Minister Laxmi Hebbalkar
Photo Credit : News Kannada

ಉಡುಪಿ:  ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನರಾರಂಭಿಸುವುದರ ಜತೆಗೆ ಹೆಚ್ಚಿನ ಬಸ್‌ಗಳನ್ನು ಒದಗಿಸಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮನವಿ ಮಾಡಿದ್ದಾರೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಕಾಂಚನ್ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವುದರಿಂದ ಜಿಲ್ಲೆಯ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಉಡುಪಿ ನಗರಪ್ರದೇಶದಲ್ಲಿ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ 40ಕ್ಕೂ ಅಧಿಕ ಸರಕಾರಿ ನರ್ಮ್ ಬಸ್ಸುಗಳನ್ನು ಗ್ರಾಮೀಣ ಪ್ರದೇಶದಲ್ಲಿ ಓಡಾಟ ನಡೆಸುವ ನಿಟ್ಟಿನಲ್ಲಿ ಆರಂಭಿಸಿತ್ತು. ಇದರಲ್ಲಿ ಶಾಲೆಯ ವಿದ್ಯಾರ್ಥಿಗಳು ಮತ್ತು ಮಹಿಳೆಯರು ದಿನನಿತ್ಯ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದರು.

ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ಸುಗಳ ಭರಾಟೆ ಮತ್ತು ಲಾಭಿಯಿಂದಾಗಿ ಕೊರೋನಾ ಸಮಯದಲ್ಲಿ ಹೆಚ್ಚಿನ ಸರಕಾರಿ ನರ್ಮ್ ಬಸ್ಸುಗಳು ತಮ್ಮ ಸಂಚಾರವನ್ನು ನಿಲ್ಲಿಸಿದ್ದು, ಇಂದಿಗೂ ಕೂಡ ಮತ್ತೆ ಸಂಚಾರ ಆರಂಭಿಸಿಲ್ಲ ಎಂದರು. ಉಡುಪಿ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ನರ್ಮ್ ಬಸ್ಸುಗಳ ಸಂಚಾರದಿಂದ ಜನರಿಗೆ ಹೆಚ್ಚಿನ ಅನೂಕೂಲವಾಗುತ್ತದೆ. ಇಂದಿಗೂ ಹಲವಾರು ಗ್ರಾಮಾಂತರ ಪ್ರದೇಶದಲ್ಲಿ ಖಾಸಗಿ ಬಸ್ಸುಗಳೂ ಸಹ ಸಂಚರಿಸದ ಪರಿಸ್ಥಿತಿ ಇದೆ. ಈಗಾಗಲೇ ನಿಂತಿರುವ ನರ್ಮ್ ಬಸ್ಸುಗಳನ್ನು ಮತ್ತೆ ಆರಂಭಿಸಿದ್ದಲ್ಲಿ ಇದರಿಂದ ಮಹಿಳಾ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನೂಕೂಲವಾಗುತ್ತದೆ.

ಇದರೊಂದಿಗೆ ಜಿಲ್ಲೆಯ ವಿವಿಧ ಭಾಗಗಳಿಗೆ ಹೆಚ್ಚಿನ ಸರಕಾರಿ ಬಸ್ಸುಗಳನ್ನು ಆರಂಭಿಸಿದ್ದಲ್ಲಿ ಇದರಿಂದ ಜನರಿಗೆ ಸರಕಾರದ ಯೋಜನೆಯ ಪ್ರಯೋಜನ ಪ್ರಾಮಾಣಿಕವಾಗಿ ತಲುಪಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸಾರಿಗೆ ಸಚಿವರ ಗಮನಕ್ಕೆ ಈ ವಿಷಯವನ್ನು ತಂದು ಅವರ ಮೂಲಕ ಸರಕಾರಕ್ಕೆ ಮನವರಿಕೆ ಮಾಡಿ ಜಿಲ್ಲೆಯಲ್ಲಿ ಈಗಾಗಲೇ ಓಡಾಟ ನಿಲ್ಲಿಸಿರುವ ನರ್ಮ್ ಬಸ್ಸುಗಳು ಮತ್ತೆ ಸಂಚಾರ ಆರಂಭಿಸುವಂತೆ ಹಾಗೂ ಹೊಸ ಸರಕಾರಿ ಬಸ್ಸುಗಳನ್ನು ಒಡಿಸುವಂತೆ ಸಚಿವೆಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗಣೇಶ್ ನೆರ್ಗಿ, ಸತೀಶ್ ಕುಮಾರ್ ಮಂಚಿ, ಭರತ್ ಮಣಿಪಾಲ್, ಸದಾನಂದ್ ಮೂಲ್ಯ, ಕೃಷ್ಣಮೂರ್ತಿ ಆಚಾರ್ಯ, ಸುಕನ್ಯಾ ಪೂಜಾರಿ, ವಿಘ್ನೇಶ್ ಕಿಣಿ ಹಾಗೂ ಹಲವರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು