ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪಣಿಯೂರು ಕ್ರಾಸ್ ಜಂಕ್ಷನ್ ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ಸ್ಟೇ ವಯರ್ಗೆ ಸಿಲುಕಿ ಗರ್ಭಿಣಿ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಪ್ರಾಣಬಿಟ್ಟ ಹೃದಯ ವಿದ್ರಾವಕ ಘಟನೆ ನಿನ್ನೆ ಸಂಜೆ ನಡೆದಿದೆ.
ಉಚ್ಚಿಲ ಭಾಸ್ಕರ ನಗರ ನಿವಾಸಿ ಇಸ್ಮಾಯಿಲ್ ಅವರ ತಿಂಗಳ ಗರ್ಭಿಣಿ ಹಸುವೊಂದು ಮೇವನ್ನು ಹರಿಸಿಕೊಂಡು ಉಚ್ಚಿಲ ಪಣಿಯೂರು ಕ್ರಾಸ್ ಜಂಕ್ಷನ್ ಬಳಿ ಬಂದಿದ್ದು, ಈ ವೇಳೆ ಹೆದ್ದಾರಿ ಬಳಿಯ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಳಿ ಮೇಯುತ್ತಿದ್ದಾಗ ಟ್ರಾನ್ಸ್ಫಾರ್ಮರ್ನ ಸ್ಟೇ ವಯರ್ಗೆ ಸಿಲುಕಿಕೊಂಡಿದೆ. ಅದರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಹಳೆಯ ಜೋತು ಬಿದ್ದಿದ್ದ ಸ್ಟೇ ವಯರ್ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗೆ ತಗುಲಿದ ಪರಿಣಾಮ ಹಸುವಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದರಿಂದ ಹಸು ಅಲ್ಲೇ ಅಸುನೀಗಿದೆ.
ಮಾಹಿತಿ ಪಡೆದ ಮೆಸ್ಕಾಂ ನಿರ್ವಾಹಕ ಸ್ಥಳಕ್ಕೆ ಬಂದು ವಿದ್ಯುತ್ ನಿಲುಗಡೆಗೊಳಿಸಿದ್ದಾರೆ. ಸದಾ ಜನನಿಬಿಡ, ವಾಹನ ದಟ್ಟಣೆಯಿಂದ ಕೂಡಿದ ಈ ಪ್ರದೇಶದಲ್ಲಿ ಹಳೆಯ ಸ್ಟೇ ವಯರ್ ಹೊಂದಿದ್ದ ಈ ಮೆಸ್ಕಾಂ ವಿದ್ಯುತ್ ಟ್ರಾನ್ಸ್ಫಾರ್ಮರ್ ಸಮರ್ಪಕ ನಿರ್ವಹಣೆ ಇಲ್ಲದೆ ಇಂತಹ ಅವಘಡ ಘಟಿಸಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶವ್ಯಕ್ತವಾಗಿದೆ. ಮೆಸ್ಕಾಂ ಈ ಬಗ್ಗೆ ಕ್ರಮಕೈಗೊಂಡು ದನದ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…