News Karnataka Kannada
Friday, May 10 2024
ಉಡುಪಿ

ಉಡುಪಿ: ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಗೆ ಚೂರಿ ಇರಿತ

New Project 2024 01 30t193355.093
Photo Credit : News Kannada

ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ. 29ರಂದು ಮಧ್ಯಾಹ್ನ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

ಅಲ್ಲಿ ಸುಹಾಸ್ ಎಂಬಾತ ಪರಿಚಯವಾಗಿತ್ತು. ಪ್ರತೀಕ್ ಒಂದುವರೆ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದರು. ಇದನ್ನು ನೋಡಿದ ಸುಹಾಸ್ ನು ಹೊಟ್ಟೆ ಕಿಚ್ಚಿನಿಂದ ನೀನು ಈ ಬೈಕ್ ನ್ನು ಕದ್ದಿದ್ದೀಯಾ ಎಂದು ಹಿಯಾಲಿಸಿದ್ದನು. ಜ. 29ರಂದು ಮಧ್ಯಾಹ್ನ ವೇಳೆ ಪ್ರತೀಕ್ ಅವರು, ಎಂಜಿಎಂ ಮೈದಾನಕ್ಕೆ ಹೋದಾಗ ಅಲ್ಲಿದ್ದ ಆರೋಪಿಗಳಾದ ಸುಹಾಸ್, ಮೋನೀಶ್‌, ತರುಣ್ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇನ್ನೋರ್ವ ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತೀಕ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು