ಕಾರ್ಕಳ: ಉತ್ತಮ ಆಡಳಿತ ನಡೆಸುವ ಮೂಲಕ ದೇಶ, ವಿದೇಶಗಳಲ್ಲಿ ಗಮನ ಸೆಳೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನಕರ ಹೇಳಿಕೆಯೂ ದೇಶಕ್ಕೆ ತೋರಿದ ಅವಮಾನವೆಂದು ಸಚಿವ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತ ವ್ಯಕ್ತಪಡಿಸಿದರು.
ವಿಕಾಸ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕರಣಕೋಸ್ಕರ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ನೀಡಿರುವ ಅವಮಾನಕರ ಹೇಳಿಕೆಯನ್ನು ಸಮಾಜವು ಸಹಿಸುವುದಿಲ್ಲ. ಈ ಹಿಂದೆಯೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿದ್ಧರಾಮಯ್ಯ ಇವರು ಪದೇ ಪದೇ ಅವಮಾನಕಾರ ಹೇಳಿಕೆ ನೀಡುತ್ತಿದುದ್ದು ಖಂಡನಾರ್ಹವಾಗಿದೆ.
ಗಾಂಧಿ ಕುಟುಂಬದ ರಾಜಕೀಯ ಓಲೈಕೆಗಾಗಿ ಪ್ರಧಾನಿಯನ್ನು ದೂಷಿಸುವುದಕ್ಕೆ ಉಗ್ರಖಂಡನೆ ವ್ಯಕ್ತಪಡಿಸಿದ ಸಚಿವ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ಹಣೆಯಲ್ಲಿದ್ದ ಕುಂಕುಮವನ್ನು ಒರೆಸಿರುವುದು ನೋಡಿದಾಗ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರ ಹಣೆಯಿಂದಲೂ ಕುಂಕುಮ ಒರೆಸುತ್ತಾರೆಂದು ಭಾಸವಾಗುತ್ತದೆ.
ಸಿದ್ಧರಾಮಯ್ಯನವರಿಗೆ ಮೊದಲಿನಿಂದಲೇ ಕುಂಕುಮ ವೆಂದರೆ ತುಂಬ ಅಲರ್ಜಿ. ಕಾಂಗ್ರೆಸ್ನ ಕಾರ್ಯಧ್ಯಕ್ಷನಿಗೆ ಹಿಂದು ಎಂಬುವುದು ಅಶೀಲ್ಲ ಪದವೆಂದು ಹೀಗೆಳೆದಿರುವುದು ಭಾರತ ಸಂಸ್ಕೃತಿ ಮಾರಕ. ರಾಜ್ಯದ ಮತದಾರರು ಎಚ್ಚರಿಕೆ ವಹಿಸಿಕೊಳ್ಳವ ಕಾಲ ಕೂಡಿಬಂದಿದೆ ಎಂದರು.
ತುಷ್ಟೀಕರಣ ರಾಜಕರಣಕ್ಕೆ ಒಂದು ಇತಿ ಮಿತಿ ಎಂಬುವುದು ಇದೆ ಎಂದು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರ ವರ್ತನೆಯನ್ನು ಖಂಡಿಸಿದರು.
ಮಹಾಸಂಪರ್ಕ ಅಭಿಯಾನ…
ತಿಂಗಳ ತಿಂಗಳ ೩೦ನೇ ತಾರೀಕಿಗೆ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಹಾಸಂಪರ್ಕ ಅಭಿಯಾನ ನಡೆಯಲಿದೆ. ೨೧೦ ಬೂತ್ ಗಳಲ್ಲಿ ಏಕಕಾಲದಲ್ಲಿ ಪ್ರತಿಯೊಂದು ಮನೆಗಳಿಗೆ ಬಿಜೆಪಿ ಕಾರ್ಯಕರ್ತರು ತೆರಳಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸೀಮಹ ನಾಯಕ್, ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ಪ್ರಚಾರ ಸಮಿತಿಯ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಉಪಸ್ಥಿತರಿದ್ದರು.
ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ.ರಾಜನಾಥ್ ಸಿಂಗ್ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ…
ಕತಾರ್ ಮಾಲೀಕತ್ವದ ಅಲ್–ಜಜೀರಾ ಸುದ್ದಿವಾಹಿನಿಯ ಸ್ಥಳೀಯ ಕಚೇರಿಗಳನ್ನು ಮುಚ್ಚಲು ಸರ್ಕಾರ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್…
ಅಶ್ಲೀಲ ವಿಡಿಯೊ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮೊದಲ ಬಾರಿಗೆ…
ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ…
ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…
ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್ ಇಟ್ಟುಕೊಂಡು…