ಉಡುಪಿ: ಹೆರ್ಗ ಗ್ರಾಮದ ಸರಳಬೆಟ್ಟುವಿನಲ್ಲಿ ನಗರಸಭೆಯಿಂದ ನಿರ್ಮಾಣಗೊಳ್ಳುತ್ತಿರುವ ವಸತಿ ಸಮುಚ್ಚಯದ ಫಲಾನುಭವಿಗಳಿಗೆ ಅತೀ ಶೀಘ್ರದಲ್ಲಿ ಮನೆ ಹಸ್ತಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದರು. ಕೂಡಲೇ ಮನೆ ಕಾಮಗಾರಿಗೆ ಪೂರಕ ಅನುದಾನ ಬಿಡುಗಡೆಗೊಳಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ ನಗರ ಸಭೆ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. ಶೀಘ್ರದಲ್ಲೇ ಬೆಂಗಳೂರಿನಲ್ಲಿ ವಸತಿ ಸಚಿವರು ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸುವುದಾಗಿ ಹೇಳಿದರು.
ಕೃಷ್ಣ ಜನ್ಮಷ್ಟಮಿ, ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ರಸ್ತೆ ಬದಿಯ ಕಳೆ ತೆಗೆಯಲು, ಸ್ವಚ್ಚತೆ ಹಾಗೂ ಗಣೇಶ ವಿಸರ್ಜನೆ ಮೆರವಣಿಗೆ ಹಾದಿಯ ರಸ್ತೆಗಳ ದುರಸ್ಥಿ, ತ್ಯಾಜ್ಯ ವಿಲೇವಾರಿ, ಅನಧಿಕೃತ ಜಾಹೀರಾತು ಫಲಕ ತೆರವು, ಇಂಡಸ್ಟ್ರಿಯಲ್ ಪ್ರದೇಶದ ರಸ್ತೆ ಕಾಮಗಾರಿ, ನಗರಸಭಾ ವ್ಯಾಪ್ತಿಯಲ್ಲಿ ಡೆಂಗ್ಯೂ, ಮಲೇರಿಯಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಿರಂತರ ಫಾಗಿಂಗ್ ನಡೆಸುವಂತೆ ತಿಳಿಸಿದರು.
ಸಮರ್ಪಕ ದಾರಿದೀಪ ನಿರ್ವಹಣೆ, ಟೆಂಡರ್ ವಹಿಸಿ ಬಾಕಿ ಇರುವ ಕಾಮಗಾರಿಗಳ ಅನುಷ್ಠಾನ, ಬೀದಿ ನಾಯಿ ಸಮಸ್ಯೆ, ನಿಧಾನಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸುವ ಬಗ್ಗೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಜನಜಾಗೃತಿ ಮೂಡಿಸುವಂತೆ ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ನಗರಸಭೆ ಪೌರಾಯುಕ್ತರಾದ ರಾಯಪ್ಪ, ನಗರ ಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.