News Karnataka Kannada
Wednesday, May 08 2024
ಉಡುಪಿ

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ದೇವರ ವಿಗ್ರಹ

The idol of Lord Parashurama on the umikal hill is beckoning tourists.
Photo Credit : News Kannada

ಉಡುಪಿ : ದೇಶದ ಅತೀ ದೊಡ್ಡ ಪರಶುರಾಮ ದೇವರ ವಿಗ್ರಹ ಇಲ್ಲಿನ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣಗೊಂಡಿದ್ದು, ದೇಶ ವಿದೇಶದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರು ಕಾರ್ಕಳವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸುಮಾರು 10 ಕೋಟಿ ರು. ವೆಚ್ಚದಲ್ಲಿ ಈ ಪರಶುರಾಮ್ ಥೀಮ್ ಪಾರ್ಕ್ ಯೋಜನೆ ಕಾರ್ಯರೂಪಕ್ಕೆ ಬಂದಿದೆ.

ಉಡುಪಿಯಿಂದ ಕಾರ್ಕಳ ತೆರಳುವ ರಾಷ್ಟ್ರೀಯ ಹೆದ್ದಾರಿಯ ಬೈಲೂರ ಗ್ರಾಮದ ಈ ಉಮಿಕಲ್ ಬೆಟ್ಟದ ಹಸಿರು ಪ್ರಕೃತಿ ಸೌಂದರ್ಯದ ಮಧ್ಯೆ ವಿಶಾಲವಾದ ಬಂಡೆಕಲ್ಲಿನ ಮೇಲೆ 33 ಅಡಿ ಎತ್ತರದ ಪರಶುರಾಮನ ಅತ್ಯಾಕರ್ಷಕ ಈ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

ಸಮುದ್ರ ಮಟ್ಟದಿಂದ 500 ಅಡಿ ಎತ್ತಡದಲ್ಲಿರುವ ಈ ಉಮಿಕಲ್ ಬೆಟ್ಟದ ತುತ್ತುತದಿಯಲ್ಲಿ 10 ಅಡಿ ಎತ್ತರದ ಪೀಠದ ಮೇಲೆ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಜೊತೆ 1000 ಮಂದಿ ಆಸೀನರಾಗಬಹುದಾದ ತೆರೆದ ರಂಗಮಂದಿರ, ಪರಶುರಾಮನ ಕತೆ ಹೇಳುವ ಆಡಿಯೋ ವಿಶ್ಯುವಲ್ – ಆರ್ಟ್ ಗ್ಯಾಲರಿ – ಮ್ಯೂಸಿಯಂ ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ರೆಸ್ಟೋರೆಂಟ್ ಕೂಡ ಇಲ್ಲಿದೆ.

ಉಡುಪಿಯ ಯುವ ವಾಸ್ತುವಿನ್ಯಾಸಗಾರ ಎ.ಆರ್. ಸಂಪ್ರೀತ್ ರಾವ್ ಈ ಥೀಮ್ ಪಾರ್ಕನ್ನು ವಿನ್ಯಾಸಗೊಳಿಸಿದ್ದು, ಸುಮಾರು 100 ಅಡಿ ಎತ್ತರದ ಬಂಡೆಕಲ್ಲನ್ನು ಮತ್ತು ಅದರ ಸುತ್ತ ಪ್ರಾಕೃತಿಕ ಪರಿಸರ – ಮರಗಳನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಿದೆ. ಉಡುಪಿ ನಿರ್ಮಿತಿ ಕೇಂದ್ರ ಈ ಯೋಜನೆಯ ನಿರ್ಮಾಣದ ಉಸ್ತುವಾರಿ ವಹಿಸಿದ್ದು, ವರ್ಷದೊಳಗೆ ನಿರ್ಮಾಣ ಕಾಮಗಾರಿಯನ್ನು ಪೂರೈಸಿದೆ.

ಬೆಂಗಳೂರಿನ ಖ್ಯಾತ ಶಿಲ್ಪಿ ಕೃಷ್ಣ ನಾಯಕ್ ಈ 33 ಅಡಿ ಎತ್ತರದ ಕಂಚಿನ ವಿಗ್ರಹವನ್ನು ನಿರ್ಮಿಸಿದ್ದಾರೆ. ಆರ್ಟ್ ಮ್ಯೂಸಿಯಂನಲ್ಲಿ ಪರಶುರಾಮರ ಜೀವನ ಚರಿತ್ರೆಯನ್ನು ಪರಿಚಯಿಸುವ ಪೈಬರ್ ಗ್ಲಾಸ್ ಉಬ್ಬುಚಿತ್ರಗಳನ್ನು ಖ್ಯಾತ ಕಲಾವಿದ ಪುರುಷೋತ್ತಮಅಡ್ವೆ ಅವರು ರಚಿಸಿದ್ದಾರೆ.

ಈ ಯೋಜನೆಗೆ ಪ್ರವಾಸೋದ್ಯಮ ಇಲಾಖೆಯಿಂದ 6.50 ಕೋಟಿ ರು., ಮಲೆನಾಡು ಅಭಿವೃದ್ಧಿ ಮಂಡಳಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಪಿಟಿಸಿಎಲ್ ನ ಸಿಎಸ್‍ಆರ್ ನಿಧಿಯಿಂದ ತಲಾ 1ಕೋಟಿ ರು.ಗಳ ಅನುದಾನವನ್ನು ಪಡೆಯಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು