News Karnataka Kannada
Friday, May 17 2024
ಉಡುಪಿ

ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Pravin Chougule's bail plea rejected
Photo Credit : News Kannada

ಉಡುಪಿ: ನೇಜಾರು ತಾಯಿ ಹಾಗೂ ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ (39)ಯ ನ್ಯಾಯಾಂಗ ಬಂಧನ ಅವಧಿ ಡಿ.30ರವರೆಗೆ ವಿಸ್ತರಣೆಗೊಂಡಿದೆ.

ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆಗೊಳಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.

ಡಿ.5ರಂದು ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರವರೆಗೆ ವಿಸ್ತರಿಸಿತ್ತು. ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶೆ ದೀಪಾ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು