News Karnataka Kannada
Thursday, May 02 2024
ಉಡುಪಿ

ಪೆರಂಪಳ್ಳಿ ಶೀಂಬ್ರ ಬ್ರಿಡ್ಜ್ ಬಳಿ ರಸ್ತೆ ಅಭಿವೃದ್ಧಿಗೆ ಖಾಸಗಿ ಜಾಗದ ಸಮಸ್ಯೆ

The problem of private land for road development near Perampalli Shimbra Bridge; Mla's persuasion of locals
Photo Credit : News Kannada

ಮಣಿಪಾಲ: ಮಣಿಪಾಲ – ಪೆರಂಪಳ್ಳಿ – ಶೀಂಬ್ರ ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ 7 ಕೋಟಿ ಅನುದಾನ ಮಂಜೂರಾಗಿದ್ದು, ಭಾಗಶಃ ಕಾಮಗಾರಿ ಪೂರ್ಣಗೊಂಡಿದೆ.

ಈ ರಸ್ತೆ ಹಾದುಹೋಗುವ ಪೆರಂಪಳ್ಳಿಯ ಶೀಂಬ್ರ ಬ್ರಿಡ್ಜ್ ಬಳಿ ರಸ್ತೆ ಅಗಲೀಕರಣಕ್ಕೆ ಖಾಸಗಿ ಜಾಗದ ಸಮಸ್ಯೆ ಉಂಟಾಗಿ ರಸ್ತೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದರಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಸ್ಥಳೀಯರ ಮನವಿಯಂತೆ ಶಾಸಕ ಕೆ. ರಘುಪತಿ ಭಟ್ ಅವರು ಇಂದು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನ ಪಡಿಸಲು 50 ಲಕ್ಷ ರೂ. ಮಂಜೂರಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಮೂಲಕ ಜಾಗ ಬಿಟ್ಟುಕೊಡುವ ಖಾಸಗಿ ಜಾಗದ ಮಾಲೀಕರಿಗೆ ಪರಿಹಾರ ನೀಡುವುದಾಗಿ ಶಾಸಕರು ತಿಳಿಸಿದರು. ಇದಕ್ಕೆ ಖಾಸಗಿ ಜಾಗದ ಮಾಲೀಕರು ಸಮ್ಮತಿ ಸೂಚಿಸಿದರು. ಶೀಘ್ರವೇ ರಸ್ತೆ ಕಾಮಗಾರಿಯನ್ನು ಆರಂಭಿಸುವಂತೆ ಶಾಸಕರು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ಅರುಣಾ ಪೂಜಾರಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ದಿನೇಶ್, ಸಹಾಯಕ ಅಭಿಯಂತರರಾದ ಗಿರೀಶ್, ಗುತ್ತಿಗೆದಾರರಾದ ಮಹೇಶ್, ಮತ್ತು ಸ್ಥಳೀಯರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು