Categories: ಉಡುಪಿ

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಉಡುಪಿ: ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆ ಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಎಂದು‌ ಗುರುತಿಸಲಾಗಿದೆ. ಇವರ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು.

ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್‌ ಹಾಗೂ ಕೋಟ ಪೊಲೀಸ್‌ ಠಾಣಾಧಿಕಾರಿ ತೇಜಸ್ವಿ, ಸಿಬಂದಿ ಪ್ರಸನ್ನ, ಕೃಷ್ಣ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಂದಾಗಿ ಮುರ್ಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್‌ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

16 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

35 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

1 hour ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago