Categories: ಉಡುಪಿ

ಜಾತಿ-ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವಂತಹ ಕುತಂತ್ರ ನಡೆಯುತ್ತಿದೆ: ಪದ್ಮರಾಜ್

ಕಾರ್ಕಳ: ರಾಷ್ಟ್ರ ಮತ್ತು ರಾಜ್ಯದಲ್ಲಿ ಅಧಿಕಾರದ ಲಾಲಾಸೆಗೆ ಬಿಜೆಪಿಯೂ ಜನರನ್ನು ಭಾವನಾತ್ಮಕವಾಗಿ ಯಮಾರಿಸುತ್ತಿದೆ. ಜಾತಿ-ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವಂತಹ ಕುತಂತ್ರ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯದರ್ಶೀ ಪದ್ಮರಾಜ್ ಹೇಳಿದರು.

ನಗರದ ಹೊಟೇಲ್‌ವೊಂದರಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ಕಾಲಘಟ್ಟದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭಾ ಚುನಾವಣೆಯು ದೇಶದ ರಾಜಕೀಯ ಇತಿಹಾಸವನ್ನೇ ಬದಲಾವಣಿ ತರಲಿದೆ ಎಂಬ ವಿಶ್ವಾಸವನ್ನು ಇದೇ ಸಂದರ್ಭದಲ್ಲಿ ಅವರು ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರವೇ ತುಂಬಿ ತುಳುಕುತ್ತಿದೆ. ರಸ್ತೆಯೊಂದೇ ಅಭಿವೃದ್ಧಿಯ ಪೂರಕವಲ್ಲ. ರಾಜ್ಯಕ್ಕೆ ಮಾರಕವಾದ ಭ್ರಷ್ಟಾಚಾರವು ತುಂಬಿತುಳುಕುತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕುವ ಬದಲಾಗಿ ಭಾರತ ವಿಶ್ವ ಗುರು ಎಂದು ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

೨೦೧೩-೧೮ರ ತನಕ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನೀಡಿದ ೧೬೫ ಭರವಸೆಗಳಲ್ಲಿ ೧೫೮ ಪೂರೈಸಿದೆ. ಕಾಂಗ್ರೆಸ್ ಬಡವರ ಪರವಾಗಿರುವ ಪಕ್ಷವಾಗಿದೆ. ವಿಶ್ವಗುರು ಭಾರತವೆಂದು ಘಂಟಾಘೋಷವಾಗಿ ಬಿಜೆಪಿ ಸಾರುತ್ತಿದ್ದರೂ, ದೇಶದಲ್ಲಿ ಯುವಸಮುದಾಯ ವಿಶ್ವದಲ್ಲಿಯೇ ಅತ್ಯಧಿಕ ಸಂಖ್ಯೆಯಲ್ಲಿ ಇದ್ದರೂ ನಿರುದ್ಯೋಗ ಸಮಸ್ಸೆ ತಾಂಡವವಾಡುತ್ತಿದೆ. ಉದ್ಯೋಗ ಸೃಷ್ಠಿಗಾಗಿ ಎಷ್ಟು ಉದ್ಯಮಗಳನ್ನು ಬಿಜೆಪಿ ಸರಕಾರ ಹುಟ್ಟು ಹಾಕಿದೆ ಎಂದು ಅವರು ಪ್ರಶ್ನಿಸಿದರು.

ಪ್ರಸಕ್ತಸಾಲಿನಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ನೀಡುವ ಗ್ಯಾರೆಂಟಿಯ ಕುರಿತು ಅನುಮಾನ ಮೂಡಿಸುವ ಬಿಜೆಪಿಗರ ಜಾಯಮಾನವನ್ನು ಖಂಡಿಸಿದ ಅವರು ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿರುವ ಶೇ.೪೦ ಭ್ರಷ್ಟಾಚಾರದ ಮೊತ್ತದಲ್ಲಿ ಶೇ. ೨೦ರಷ್ಟು ಭಾಗವನ್ನು ಅದಕ್ಕಾಗಿ ವಿನಿಯೋಗಿಸಿದರೆ ಉಳಿದ ಶೇ. ೨೦ ಮೊತ್ತವು ಸರಕಾರ ಖಜಾನೆಯಲ್ಲಿ ಉಳಿತಾಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಸಮಾಜ ಮುಖಿ ಕೆಲಸಕಾರ್ಯದಿಂದಾಗಿ ಜನತೆಗೆ ಪರಿಚಿತರು. ವೈದ್ಯಕೀಯ ಕಾಲೇಜಿ, ಕ್ರೀಡಾ ತರಬೇತಿ ಕೇಂದ್ರ, ಐತಿ ಪಾರ್ಕ್ಗಳನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆರಂಭಿಸುವ ಮೂಲಕ ಕ್ಷೇತ್ರದ ಜನತೆಗೆ ಇದರಿಂದ ಹೆಚ್ಚಿನ ರೀತಿಯಲ್ಲಿ ಪ್ರಯೋಜನ ಪಡೆಯಲಿದ್ದಾರೆ. ಅವರು ಕ್ಷೇತ್ರದ ಶಾಸಕರಾಗಿ ಆಯ್ಕೆಗೊಳ್ಳುವ ಮೂಲಕ ಇವೆಲ್ಲವೂ ಕಾರ್ಯರೂಪಕ್ಕೆ ಬರಲಿದೆ ಎಂದರು.

ಮುಖಂಡರಾದ ಸದಾಶಿವ ದೇವಾಡಿಗ, ಸುಭೀತ್ ಎನ್.ಆರ್, ಜಾನ್‌ಕ್ಯಾಸ್ಟೋಲಿನೋ, , ಶೇಖರ್ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

44 mins ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

55 mins ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

1 hour ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

1 hour ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

1 hour ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

2 hours ago