Categories: ಉಡುಪಿ

ರಕ್ತದಾನಕ್ಕಿಂತ ಶ್ರೇಷ್ಟದಾನ ಮತ್ತೊಂದಿಲ್ಲ: ಡಾ. ಎಚ್.ಎಸ್ ಬಲ್ಲಾಳ್ ಅಭಿಪ್ರಾಯ

ಉಡುಪಿ: ರಕ್ತದಾನಕ್ಕಿಂತ ಶ್ರೇಷ್ಟದಾನ ಮತ್ತೊಂದಿಲ್ಲ ಎಂದು ಮಾಹೆಯ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಚ್.ಡಿಎಫ್ ಸಿ ಬ್ಯಾಂಕ್, ಜ್ಞಾನ ಸುಧಾ ಪಿಯು ಕಾಲೇಜು ಹಾಗೂ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ರಕ್ತನಿಧಿ ಘಟಕದ ಸಹಯೋಗದಲ್ಲಿ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ಇಂದು ಹಮ್ಮಿಕೊಂಡ 15ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ. ಇಂತಹ ಜೀವ ಉಳಿಸುವ ರಕ್ತವನ್ನು ದಾನ ಮಾಡುವುದರ ಮೂಲಕ ಆರೋಗ್ಯವಂತರಾಗಿ ಬಾಳಬಹುದು. ಮಾತ್ರವಲ್ಲದೇ ಇದರಿಂದ ಅಗತ್ಯ ಇರುವವರಿಗೆ ಅನುಕೂಲವಾಗುತ್ತದೆ. ಗಾಂಧಿ ಆಸ್ಪತ್ರೆ ವರ್ಷಕ್ಕೆ ಎರಡು ಬಾರಿ ರಕ್ತದಾನ ಶಿಬಿರ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಎಂ ಹರೀಚ್ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಚ್.ಡಿಎಫ್ ಸಿ ಮಾಜಿ ಟ್ರೆಸರಿ ಮುಖ್ಯಸ್ಥ ಸುರೇಶ್ ಪ್ರಭು, ಜ್ಞಾನಸುಧಾ ಪಿಯು ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ, ಮಣಿಪಾಲ ಟೆಕ್ನಾಲಜೀಸ್ ನ ಎಂಡಿ ಅಭಯ್ ಗುಪ್ತೆ ಉಪಸ್ಥಿತರಿದ್ದರು.

Ashika S

Recent Posts

ಡಿಕೆಶಿ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್‌ ಪ್ರತಿಭಟನೆ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್‌ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು…

3 mins ago

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮದುವೆ ದಿನಾಂಕ ಫಿಕ್ಸ್

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ…

17 mins ago

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಹತ್ಯೆ

ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

18 mins ago

ಮೆಕ್ಯಾನಿಕ್‌ಗಳ ಬಗ್ಗೆ ಅವಹೇಳ ಹೇಳಿಕೆ : ಝೀ ವಾಹಿನಿ ವಿರುದ್ಧ ಗ್ಯಾರೇಜ್‌ ಮಾಲಿಕರ ಸಂಘ ಆಕ್ರೋಶ

ಇತ್ತೀಚೆಗಷ್ಟೆ ಝೀ ವಾಹಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕ್ಯಾನಿಕ್‌ಗಳ ಬಗ್ಗೆ ಹೇಳಿಕೆ ನೀಡಲಾಗಿತ್ತು ಹಾಗೂ ತೀರ್ಪುಗಾರರ ವಿರುದ್ಧ ಕೇಸ್‌ ಕೂಡ…

29 mins ago

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್‌

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ.

35 mins ago

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

50 mins ago