ಉಡುಪಿ: ಜಿಲ್ಲೆಯಾದ್ಯಂತ ಹೆಚ್ಚು ವಾಹನ ಸಂಚಾರ ಇರುವ ರಸ್ತೆ ಬದಿಯ ಶಾಲಾ ಕಾಲೇಜುಗಳ ಸೆಕ್ಯುರಿಟಿ ಗಾರ್ಡ್ ಅಥವಾ ಸಿಬ್ಬಂದಿಗೆ ಮಕ್ಕಳನ್ನು ರಸ್ತೆ ದಾಟಿಸುವ ಸೇರಿದಂತೆ ಮೂಲಭೂತ ಟ್ರಾಫಿಕ್ ವ್ಯವಸ್ಥೆಯ ಕುರಿತು ತರಬೇತಿ ಕಾರ್ಯಾಗಾರವನ್ನು ಜೂ.26ರಿಂದ ಹಮ್ಮಿಕೊಳ್ಳಲಾಗುವುದು ಎಂದು ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಬಿಟ್ಟ ಕೂಡಲೇ ರಸ್ತೆ ದಾಟಿಸುವ ಬಗ್ಗೆ, ಸಂಚಾರಿ ನಿಯಮಗಳ ಬಗ್ಗೆ ಈ ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಗುವುದು. ಹೆಚ್ಚು ವಾಹನ ಸಂಚಾರ ಇರುವ ರಸ್ತೆಯ ಬದಿಯ ಶಾಲೆ ಮೊದಲ ಆದ್ಯತೆಯಲ್ಲಿ ತರಬೇತಿ ನೀಡಲಾಗುವುದು ಎಂದರು.