Categories: ಉಡುಪಿ

ಬ್ರಹ್ಮಾವರ: ಸೀತಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಉಡುಪಿ: ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21) ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಶಾಂತ್ ಹಾಗೂ ಶ್ರೀಶಾ ಎಂಬವರು ಮನೆ ಸಮೀಪದ‌ ಸೀತಾ ನದಿಗೆ ಮೀನು ಹಿಡಿಯಲು ತೆರಳಿದ್ದರು. ದೋಣಿಯಲ್ಲಿ ಮೀನಿಗಾಗಿ ಬಲೆ‌ ಹಾಕುತ್ತಿರುವ‌ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಸಮೀಪದಲ್ಲೇ‌ ಬಟ್ಟೆ ತೊಳೆಯುತ್ತಿದ್ದ ಮಹಿಳೆ ಗಮನಿಸಿ ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದ್ದರು. ಆದರೆ, ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿತ್ತು. ಬ್ರಹ್ಮಾವರ ಠಾಣಾಧಿಕಾರಿ ಮಧು ಪಿ.ಎಸ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Nisarga K

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago