ಉಡುಪಿ : ದೊಡ್ಡಣಗುಡ್ಡೆ ಡಾ ಎ. ವಿ. ಬಾಳಿಗ ಆಸ್ಪತ್ರೆೆ ಕಮಲ್ ಎ. ಬಾಳಿಗ ಸಭಾಂಗಣದಲ್ಲಿ 31ನೇ ಮದ್ಯ ವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರವನ್ನು ಭಾನುವಾರ ಆಯೋಜಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಪ್ರಸಾದ್ ನೇತ್ರಾಲಯ ಆಸ್ಪತ್ರೆೆ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಮಾತನಾಡಿ, ದುಶ್ಚಟಗಳಿಂದ ಮುಕ್ತಿ ಹೊಂದಿದರೆ ಮಾತ್ರ ಉತ್ತಮ ಸಮಾಜ ಕಟ್ಟಲು ಸಾಧ್ಯ. ಕುಟುಂಬದಲ್ಲಿ ಶಾಂತಿ, ನೆಮ್ಮದಿ ನೆಲೆಸಬೇಕಾದರೆ ಧೂಮಪಾನ, ಮದ್ಯಪಾನದಂತಹ ದುಶ್ಚಟಗಳಿಂದ ದೂರ ಇರಬೇಕು ಎಂದು ಕಿವಿಮಾತು ಹೇಳಿದರು.
ಆಸ್ಪತ್ರೆೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಮಣಿಪಾಲ ಸಮುದಾಯ ವೈದ್ಯಕೀಯ ವಿಭಾಗದ ಡಾ ಮುರಳಿಧರ್ ಎಂ. ಕುಲಕರ್ಣಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ ಕಾರ್ಯದರ್ಶಿ ಡಾ ಕೇಶವ ನಾಯಕ್ ಉಪಸ್ಥಿತರಿದ್ದರು.
ಆಸ್ಪತ್ರೆೆ ಮನೋವೈದ್ಯ ಡಾ ಮಾನಸ್ ಇ. ಆರ್ ಸ್ವಾಗತಿಸಿದರು. ಆಸ್ಪತ್ರೆೆ ಮನೋವೈದ್ಯ ಡಾ ದೀಪಕ್ ಮಲ್ಯ ವಂದಿಸಿದರು. ಆಪ್ತ ಸಮಾಲೋಚಕಿ ಭಾಗ್ಯಶ್ರೀ ಎನ್. ನಿರೂಪಿಸಿದರು.