ಉಡುಪಿ : ಕೇರಳದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಪರಾರಿಯಾಗಿದ್ದ ರಾಜೇಶ್ (39) ಎಂಬಾತನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ತಿರುವನಂತಪುರಂ ಜಿಲ್ಲೆಯ ನೆಯ್ಯಟ್ಟಿಂಕರ ತಾಲೂಕಿನ ನಿವಾಸಿಯಾಗಿದ್ದು, ತಿರುವನಂತಪುರಂ ಗ್ರಾಮಾಂತರ ಜಿಲ್ಲೆಯ ವಟ್ಟಪ್ಪಾರ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ಅತ್ಯಾಚಾರದ ಆರೋಪದ ಮೇಲೆ ದೂರು ದಾಖಲಾಗಿದೆ. ಈತನನ್ನು ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಿ ಶಿಕ್ಷೆಗೊಳಪಡಿಸಿ, ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದ್ದು ಅಲ್ಲಿಂದ ನೆಟ್ಟು ಕಲ್ಲೇರಿ ತೆರೆದ ಜೈಲಿಗೆ ಕಳುಹಿಸಲಾಗಿದ್ದು, ಅಲ್ಲಿಂದ 2020ರ ಡಿಸೆಂಬರ್ 12ರಂದು ಜೈಲಿನಿಂದ ಪರಾರಿಯಾಗಿದ್ದ.
2012 ರಲ್ಲಿ ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಯ ತ್ವರಿತ ವಿಚಾರಣೆಯನ್ನು ನೀಡಿತು ಮತ್ತು 2013 ರಲ್ಲಿ ಅವನಿಗೆ ಮರಣದಂಡನೆ ವಿಧಿಸಿತು, ನಂತರ ಅದನ್ನು ಜೀವಾವಧಿ ಶಿಕ್ಷೆಗೆ ಗುರಿಪಡಿಸಲಾಯಿತು. ಆರೋಪಿಯು ಉಡುಪಿಯಲ್ಲಿ ನೆಲೆಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಂಡ ಬ್ರಹ್ಮಾವರ ತಾಲೂಕಿನ ಕಬ್ಬಿನ ಹಿತ್ತುವಿನ ಬಿಲ್ಲಾಡಿ ನೈಲಾಡಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕೇರಳ ಪೊಲೀಸರಿಗೆ ಮಾಹಿತಿ ನೀಡಿತ್ತು.
ನ್ಯಾಯಾಲಯದ ಆದೇಶದಂತೆ ಕೇರಳ ಪೊಲೀಸರು ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿ ಕೇರಳಕ್ಕೆ ಕರೆದೊಯ್ದಿದ್ದಾರೆ.