ಉಡುಪಿ: ಮೂರು ವರ್ಷದ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಮಗ ಸಪ್ರೈಸ್ ನೀಡಿದ ಭಾವನಾತ್ಮಕ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ರೋಹಿತ್ ಎನ್ನುವವರು ಮೂರು ವರ್ಷಗಳ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಉಡುಗೊರೆ ನೀಡಿದ್ದಾರೆ. ರೋಹಿತ್ ಮನೆಯವರಿಗೆ, ಮಿತ್ರರಿಗೆ ಸರ್ಪ್ರೈಸ್ ನೀಡಲು ಯಾವುದೇ ಮಾಹಿತಿ ನೀಡದೆ ಊರಿಗೆ ಮರಳಿದ್ದಾರೆ.
ಮನೆಗೆ ಮರಳಿದಾಗ ತಾಯಿ ಮನೆಯಲ್ಲಿ ಇರದಿರುವುದನ್ನು ಕಂಡು, ರೋಹಿತ್ ನೇರವಾಗಿ ಗಂಗೊಳ್ಳಿ ಬಂದರಿನಲ್ಲಿ ತಾಯಿ ಮೀನು ಮಾರುವ ಸ್ಥಳಕ್ಕೆ ತೆರಳಿದ್ದಾರೆ.
ರೋಹಿತ್ ತಲೆಗೆ ಟೋಪಿ, ಮುಖಕ್ಕೆ ಕರವಸ್ತ್ರ ಕಟ್ಟಿ ಕಣ್ಣಿಗೆ ಕನ್ನಡಕ ಹಾಕಿ ಮೀನು ಖರೀದಿಯ ನಾಟಕವಾಡಿದ್ದಾರೆ. ಗ್ರಾಹಕನಂತ ಮಾತನಾಡುತ್ತಲೇ ಮುಖದಿಂದ ಕರವಸ್ತ್ರ ತೆಗೆದು ಅಮ್ಮನಿಗೆ ಅಚ್ಚರಿ ಮೂಡಿಸಿದ್ದಾರೆ.
ಮಗ ದುಬೈನಲ್ಲಿದ್ದ ಎಂದುಕೊಂಡಿದ್ದ ತಾಯಿಗೆ ಕಣ್ಮುಂದೆ ಪ್ರತ್ಯಕ್ಷವಾಗಿರುವುದನ್ನು ಕಂಡು ತಾಯಿ ಕಣ್ಣೀರು ಹಾಕಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಾಯಿ-ಮಗನ ಭಾವುಕರಾಗಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…
ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…