News Karnataka Kannada
Monday, April 29 2024
ಉಡುಪಿ

ಉಡುಪಿ: ಅಪಘಾತ ಪ್ರಕರಣ, ಎರಡು ವರ್ಷದ ಬಳಿಕ ಆರೋಪಿಗೆ ಜೈಲು ಶಿಕ್ಷೆ

Udupi Court
Photo Credit : News Kannada

ಉಡುಪಿ: ದುಡುಕುತನ ಹಾಗೂ ನಿರ್ಲಕ್ಯದಿಂದ ಕಾರು ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆದು, ತೀವ್ರ ಸ್ವರೂಪದ ಗಾಯಗೊಳಿಸಿದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2020 ಜನವರಿ 7 ರಂದು ಸಂಜೆ 7 ಗಂಟೆಯ ಸುಮಾರಿಗೆ ಕೆಳಾರ್ಕಳ ಬೆಟ್ಟು ನಿವಾಸಿ ಆಲ್ವಿನ್ ಲಾರೆನ್ಸ್ ಎಂಬಾತನು ಪುತ್ತೂರು ಗ್ರಾಮದ ರಾ. ಹೆ 66 ರಲ್ಲಿ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ತನ್ನ ಕಾರನ್ನು ಎಡ ಬದಿಗೆ ಚಲಾಯಿಸಿ, ರಸ್ತೆ ಅಂಚಿನಲ್ಲಿ ನಿಂತಿದ್ದ ಜೋಸೆಫ್ ಮಿನೇಜಸ್ ಎಂಬುವವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಹಾಗೂ ಬಲಗಾಲಿನ ಮೂಳೆ ಮುರಿತವಾಗಿರುವ ಹಿನ್ನೆಲೆ, ಸಂಚಾರ ಠಾಣೆಯ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಆಲ್ವಿನ್ ಲಾರೆನ್ಸ್ ಎಂಬಾತನಿಗೆ 6 ತಿಂಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 2000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು