ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಸ್ವರ್ಣ ನದಿಯ ಬಜೆ ಅಣೆಕಟ್ಟು ಹಾಗೂ ಹೆಬ್ರಿ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಸೀತಾ ನದಿಯ ಅಕ್ಕಪಕ್ಕದಲ್ಲಿ ಇರುವ ಕೃಷಿ ಪಂಪ್ಸೆಟ್ಗಳಿಗೆ ಇಂದಿನಿಂದ (ಮಾರ್ಚ್ 23) ಅನ್ವಯವಾಗುವಂತೆ ವಾರದ 7 ದಿನಗಳ ಬದಲಿಗೆ ವಾರದಲ್ಲಿ ಒಂದು ದಿನ ಮಾತ್ರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಉಡುಪಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಈ ಸಾಲಿನ ಬೇಸಿಗೆಯ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಮೂಲಗಳಾದ ನದಿ ನೀರನ್ನು ಸಂರಕ್ಷಿಸುವ ಸಲುವಾಗಿ ಸ್ವರ್ಣ ನದಿಯ ಬಜೆ ಅಣೆಕಟ್ಟು ಹಾಗೂ ಹೆಬ್ರಿ ತಾಲೂಕಿಗೆ ಕುಡಿಯುವ ನೀರು ಪೂರೈಕೆ ಮಾಡುವ ಸೀತಾನದಿ ಅಕ್ಕಪಕ್ಕದಲ್ಲಿರುವ ಕೃಷಿ, ತೋಟಗಾರಿಕಾ ಬೆಳೆಗಳಿಗೆ ಪಂಪ್ಸೆಟ್ಗಳಿಂದ ಪ್ರತಿದಿನ ನೀರನ್ನು ಬಳಸುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ