ಉಡುಪಿ: ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಆಶ್ರಯದಲ್ಲಿ ಅಮರಶಿಲ್ಪಿ ಜಕಣಾಚಾರ್ಯರ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ ಹಾಗೂ ಶಿಲ್ಪ ಪರಂಪರೆಗೊಂದು ಗೌರವ ಸಲ್ಲಿಸುವ ಉದ್ದೇಶದಿಂದ ಇದೇ ಬರುವ ಜನವರಿ 1ರಂದು ಕುಂಜಿಬೆಟ್ಟುವಿನ ಎಂಜಿಎಂ ಮೈದಾನದಲ್ಲಿ “ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಮರಣಾ ಸಮಿತಿಯ ಸಂಚಾಲಕ ಅಲೆವೂರು ಯೋಗೀಶ್ ಆಚಾರ್ಯ ಹೇಳಿದರು.
ಉಡುಪಿಯಲ್ಲಿಂದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ಸ್ತಬ್ಧಚಿತ್ರಗಳೊಂದಿಗೆ ವೈಭವದ ಶೋಭಾಯಾತ್ರೆ ಹಾಗೂ ಬೈಕ್ ರ್ಯಾಲಿ ಎಂಜಿಎಂ ಮೈದಾನಕ್ಕೆ ಆಗಮಿಸಲಿದೆ. ಸಂಜೆ 4 ಗಂಟೆಗೆ ಆನೆಗುಂದಿ ಮಹಾಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಯು.ಕೆ.ಎಸ್. ಸೀತಾರಾಮ ಆಚಾರ್ಯ, ಅಧ್ಯಕ್ಷ ಮಧು ಆಚಾರ್ಯ, ಹರ್ಷವರ್ಧನ್ ನಿಟ್ಟೆ ಉಪಸ್ಥಿತರಿದ್ದರು.