News Karnataka Kannada
Saturday, May 04 2024
ಉಡುಪಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಈಚರ್ ಟೆಂಪೋ, ಎರಡು ಕಾರು ಜಖಂ!

Hebri
Photo Credit : News Kannada

ಉಡುಪಿ: ಕೆಳಪರ್ಕಳದ ತಿರುವಿನಲ್ಲಿ ಭತ್ತದ ಮೂಟೆ ಸಾಗಿಸುತ್ತಿದ್ದ ಈಚರ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಈಚರ್ ಟೆಂಪೋ ಉಡುಪಿಯಿಂದ ಹೆಬ್ರಿಯ ಕಡೆಗೆ ಭತ್ತದ ಮೂಟೆಗಳನ್ನು‌ ಸಾಗಿಸುತ್ತಿತ್ತು ಎನ್ನಲಾಗಿದೆ. ಮಣಿಪಾಲದಿಂದ ಕೆಳಪರ್ಕಳದ ಕಡೆಗೆ ಸಾಗುತ್ತಿದ್ದ ವೇಳೆ ಎತ್ತರ ಪ್ರದೇಶದ ತಿರುವಿನಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡ ಟೆಂಪೊ, ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಕಾರುಗಳ ಮೇಲೆ ಬಿದ್ದಿದೆ.

ಘಟನೆಯಲ್ಲಿ ಒಂದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಟೆಂಪೋದಲ್ಲಿದ್ದ ಭತ್ತದ ಮೂಟೆಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅದೃಷ್ಟವಶಾತ್ ‌ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಭಾಗದಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದೆ. ಕೆಳಪರ್ಕಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಉಡುಪಿಯಿಂದ ಪರ್ಕಳದ ಕಡೆ ಸಂಚರಿಸುವ ಬೇರೆ ಜಿಲ್ಲೆಯ ಹಾಗೂ ಅನ್ಯ ರಾಜ್ಯದ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತದೆ. ಸದ್ಯ ಕಳೆದ ಒಂದು ವಾರಗಳಿಂದ ಹೊಸ ರಸ್ತೆಯಲ್ಲಿಯೂ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಆದರೆ, ಸರಿಯಾದ ಸೂಚನಾ ಫಲಕಗಳಿಲ್ಲ. ರಕ್ಷಣಾ ಬ್ಯಾರಿಕೇಡ್ ಗಳನ್ನು ತೆಗೆಯಲಾಗಿದೆ. ಸೂಕ್ತ ಬೆಳಕಿನ ವ್ಯವಸ್ಥೆ ಕೂಡ ಇಲ್ಲ. ಹೀಗಾಗಿ ವಾಹನ ಸವಾರರು ಹಳೆಯ ರಸ್ತೆಯಲ್ಲಿ‌ ಸಂಚರಿಸಬೇಕೋ ಅಥವಾ ಹೊಸ ರಸ್ತೆಯಲ್ಲಿ ಸಂಚರಿಸಬೇಕೋ‌ ಎಂಬ ಗೊಂದಲದಲ್ಲಿದ್ದಾರೆ.

ಈ‌ ಬಗ್ಗೆ ಸಂಬಂಧಪಟ್ಟವರು ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು‌ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು