ಉಡುಪಿ: ಕ್ಷೇತ್ರದ ಹಾಲಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಯಾವುದೇ ಕಾರಣಕ್ಕೂ ಉಡುಪಿ ಟಿಕೆಟ್ ಕೈತಪ್ಪಲ್ಲ ಎಂಬ ವಿಶ್ವಾಸದಲ್ಲಿದ್ದ ರಘುಪತಿ ಭಟ್ಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.
ಉಡುಪಿ ಕ್ಷೇತ್ರದಲ್ಲಿ ರಘುಪತಿ ಭಟ್ ಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ರಘುಪತಿ ಭಟ್ ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಇಂದು ಬೆಂಬಲಿಗರ ಸಭೆ ಕರೆದಿದ್ದು, ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ರಘುಪತಿ ಭಟ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ, ಆದರೆ ಪಕ್ಷ ನಡೆಸಿಕೊಂಡ ರೀತಿ ಬೇಸರ ತಂದಿದೆ ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ ಮತ್ತು ಬಿಜೆಪಿಯಿಂದ ಇಲ್ಲಿ ಯಾರು ನಿಂತರೂ ಗೆಲ್ಲಲಿದ್ದಾರೆ ಅಂತಹ ಸ್ಥಿತಿ ನಿರ್ಮಾಣ ಮಾಡಿದ್ದೇನೆ. ಪಕ್ಷಕ್ಕೆ ಈಗ ನನ್ನ ಅವಶ್ಯಕತೆ ಇಲ್ಲ ಎಂಬುದು ತೋರಿಸುತ್ತಿದ್ದಾರೆ. ಅಮಿತ್ ಶಾ ಬೇಡ, ರಾಜ್ಯ ನಾಯಕರು ಅಥವಾ ಜಿಲ್ಲಾಧ್ಯಕ್ಷರು ಕರೆ ಮಾಡದೇ ಇರುವುದು ಬೇಸರ ತಂದಿದೆ ಎಂದರು.