ಉಡುಪಿ: ಉಡುಪಿ ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕಲ್ಮಾಡಿ ವಾರ್ಡಿನ ವ್ಯಾಪ್ತಿಯಲ್ಲಿ ನಡೆದ “ವಿಜಯ ಸಂಕಲ್ಪ ಅಭಿಯಾನ”ಕ್ಕೆ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಿದರು.
ಕಲ್ಮಾಡಿ ವಾರ್ಡಿನ ಮನೆ ಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಳೆದ 2018 ರಿಂದ ಈವರೆಗೆ ಶಾಸಕ ರಘುಪತಿ ಭಟ್ ಅವರು ಮಂಜೂರುಗೊಳಿಸಿದ ಅನುದಾನದ ಸಮಗ್ರ ವಿವರದ ಸಾಧನೆಯ ಕಿರುಹೊತ್ತಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿಜಯ ಸಂಕಲ್ಪ ಅಭಿಯಾನದ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಸುಂದರ್ ಕಲ್ಮಾಡಿ, ಉಡುಪಿ ನಗರ ಬಿಜೆಪಿ ಉಪಾಧ್ಯಕ್ಷರಾದ ವೆಂಕಟರಮಣ ಕಿದಿಯೂರು, ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ವಿನಯ್ ಕಲ್ಮಾಡಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.