ಉಡುಪಿ: ವಿಧಾನಸಭಾ ಕ್ಷೇತ್ರದ ಬಿಎಲ್ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆಯಿತು.
ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ಸಂಸದ ಟಿ.ಎನ್ ಪ್ರತಾಪನ್ ಮಾತನಾಡಿ, ಬೂತ್ ಅಧ್ಯಕ್ಷರು, ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯಿಂದ ಜನರು ಕಂಗೆಟ್ಟಿದ್ದಾರೆ. ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಲ್ಲಿರಲು ಬಯಸುತ್ತಿದ್ದಾರೆ ಎಂದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿದರು. ಈ ಸಭೆಯಲ್ಲಿ ರಾಜ್ಯ ಮೀನುಗಾರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಸುನೇಗಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿನೇಶ್ ಪುತ್ರನ್, ಸುಕುಮಾರ್, ನರಸಿಂಹಮೂರ್ತಿ, ಮುರಳಿ ಶೆಟ್ಟಿ, ಗಣೇಶ್ ನೆರ್ಗಿ, ಶ್ಯಾಮಲ ಭಂಡಾರಿ, ಗೀತಾ ವಾಘ್ಲೆ, ಅಣ್ಣಯ್ಯ ಶೇರಿಗಾರ್, ಜಯ ಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ರೋಶನ್ ಶೆಟ್ಟಿ, ಸೌರಭ್ ಬಲ್ಲಾಳ್, ಗಾಯತ್ರಿ, ಹಾಗೂ ಆಕಾಂಕ್ಷಿಗಳಾದ ದಿವಾಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ನಗರಸಭಾ ಸದಸ್ಯರು, ಪಂಚಾಯತ್ ಸದಸ್ಯರು ಹಾಗೂ ರಾಜ್ಯ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನಕರ್ ಹೇರೂರು ವಂದಿಸಿದರು. ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು.