News Karnataka Kannada
Monday, May 13 2024
ಉಡುಪಿ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ: ಲೋಕಸಭೆ ಚುನಾವಣೆ ಸಹಿತ ವಿವಿಧ ವಿಷಯಗಳ ಕುರಿತು ಚರ್ಚೆ

New Project 2024 01 09t145346.104
Photo Credit : News Kannada

ಉಡುಪಿ: ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ, ಪಕ್ಷ ಸಂಘಟನೆ ಸಹಿತ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಲಾಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಹಾಗೂ ವಿವಿಧ ಘಟಕದ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆ, ಉಡುಪಿ ನಗರಸಭೆ ಚುನಾವಣೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಬೂತ್‌ಗಳ ಸಮಿತಿ ರಚನೆ, ಪಕ್ಷ ಸಂಘಟನೆ, ಕರ್ನಾಟಕ ರಾಜ್ಯದ ವಿವಿಧ ನಿಗಮ ಮಂಡಳಿಗಳ ಸ್ಥಾನವನ್ನು ಕಾರ್ಯಕರ್ತರಿಗೆ ದೊರಕಿಸುವ ಬಗ್ಗೆ, ನಾಮನಿರ್ದೇಶಿತ ಸ್ಥಾನಗಳ ಬಗ್ಗೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಗಳು ಜನಸಾಮಾನ್ಯರ ಕಷ್ಟಕ್ಕೆ ಅತೀ ಶೀಘ್ರದಲ್ಲಿ ಸ್ಪಂದಿಸಬೇಕು ಎಂಬ ಕುರಿತು ಚರ್ಚೆ ನಡೆಸಲಾಯಿತು.

ಈ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಪುತ್ರನ್, ದಿವಾಕರ್ ಕುಂದರ್, ಕುಶಲ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಜ್ಯೋತಿ ಹೆಬ್ಬಾರ್, ಸದಾಶಿವ ಕಟ್ಟೆಗುಡ್ಡೆ, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ ರಾಜ್, ನರಸಿಂಹಮೂರ್ತಿ, ಮಹಾಬಲ ಕುಂದರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಘಟಕದ ಅಧ್ಯಕ್ಷರಾದ ನವೀನ್ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸುರೇಂದ್ರ ಆಚಾರ್ಯ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಸಲಹೆ ಸೂಚನೆಗಳನ್ನು ನೀಡಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸಭೆಯನ್ನು ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು