ಉಡುಪಿ: ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಬಿಜೆಪಿ ಭ್ರಷ್ಟ ಜನತಾ ಪಾರ್ಟಿಯಾಗಿದೆ. 40 ಪರ್ಸೆಂಟ್ ಭ್ರಷ್ಟ ಸರ್ಕಾರದಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ 40 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, 24 ಗಂಟೆ ಒಳಗೆ ಆತನ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ. ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ ಎಂದು ದೂರಿದರು.
ಈ ಎಲ್ಲಾ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ?. ರಾಜ್ಯದಲ್ಲಿ ಲೂಟಿ ಹೊಡೆದ ಹಣಕ್ಕೆ ಯಾರು ಜವಾಬ್ದಾರಿ?. ಲೂಟಿ ಹೊಡೆದ ಹಣದಲ್ಲಿ ಬಸವರಾಜ್ ಬೊಮ್ಮಾಯಿ, ಮಂತ್ರಿಗಳಿಗೆ ಎಷ್ಟು ಪಾಲು ಇದೆ?, ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಿಲ್ಲ ಯಾಕೆ?, ಕೆ ಎಸ್ ಡಿ ಎಲ್ ಅಧ್ಯಕ್ಷ ಶಾಸಕ ವಿರೂಪಾಕ್ಷಪ್ಪ ತಲೆಮರೆಸಿಕೊಳ್ಳಲು ಬಿಟ್ಟಿದ್ಯಾಕೆ?. ಈ ಭ್ರಷ್ಟಾಚಾರದಲ್ಲಿ ಬಸವರಾಜ ಬೊಮ್ಮಾಯಿ ಪಾತ್ರ ಏನು?. ನರೇಂದ್ರ ಮೋದಿ ಒಂದೇ ಒಂದು ವಾಕ್ಯ ಮಾತನಾಡುತ್ತಿಲ್ಲ ಯಾಕೆ?. ಜೆಪಿ ನಡ್ದಾ? ಅಮಿತ್ ಶಾ ಈಗ ಎಲ್ಲಿದ್ದೀರಿ..!?. ಇಡಿ, ಸಿ ಬಿ ಐ ಯಾವಾಗ ಕರ್ನಾಟಕಕ್ಕೆ ಬರುತ್ತದೆ. ಶಾಸಕರು ಮಂತ್ರಿಗಳ ಮುಖ್ಯಮಂತ್ರಿಗಳ ಮನೆಗೆ ಯಾವಾಗ ದಾಳಿ ಮಾಡುತ್ತೀರಿ? ಎಂದು ಪ್ರಶ್ನೆಗಳ ಸುರಿಮಳೆಗೈದರು.
ಚೆನ್ನಗಿರಿ ಶಾಸಕ ವಿರೂಪಾಕ್ಷಪ್ಪನ ಬಂಧನ ಆಗಬೇಕು. ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು. ಬೊಮ್ಮಾಯಿ ಮೂಗಿನ ಕೆಳಗೆ ನಡೆದ ಭ್ರಷ್ಟಾಚಾರ ಬಯಲಾಗಿದೆ. ಭ್ರಷ್ಟಾಚಾರದ ಹಣದಲ್ಲಿ ಯಾರಿಗೆಲ್ಲ ಪಾಲು ಇದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು. ಒಳಚರಂಡಿ ಮತ್ತು ನೀರು ಸರಬರಾಜು ಬೋರ್ಡ್ ನಲ್ಲಿ ಎಷ್ಟು ಸಾವಿರ ಕೋಟಿ ಈವರೆಗೆ ಲೂಟಿ ಮಾಡಿದ್ದೀರಿ?. ಒಂದು ವಾರದಲ್ಲಿ ರಾಜ್ಯದ ಮುಖ್ಯ ನ್ಯಾಯ ಮೂರ್ತಿಗಳು ಈ ಬಗ್ಗೆ ತನಿಖೆ ನಡೆಸಬೇಕು. ಭ್ರಷ್ಟಾಚಾರ ಮತ್ತು ಲೂಟಿಯ ಸಂಪೂರ್ಣ ದಾಖಲೆಯನ್ನು ತೆರೆದಿಡಬೇಕು ಎಂದು ಅವರು ಆಗ್ರಹಿಸಿದರು. ಹೇಳಿಕೆ