ಉಡುಪಿ: ಬಿಜೆಪಿ ಉಡುಪಿ ನಗರ ಮತ್ತು ನಗರ ಯುವ ಮೋರ್ಚಾ ವತಿಯಿಂದ ಇಂದು ಮಲ್ಪೆ ಬೀಚ್ ನಲ್ಲಿ ವಿಜಯ ಸಂಕಲ್ಪ ಅಭಿಯಾನ ನಡೆಸಲಾಯಿತು.
ಶಾಸಕ ಕೆ. ರಘುಪತಿ ಭಟ್ ಅವರು ಅಭಿಯಾನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕರಪತ್ರ ವಿತರಿಸಲಾಯಿತು.
ಉಡುಪಿ ನಗರ ಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕರಂಬಳ್ಳಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.