ಉಡುಪಿ: ಇಂದು ನಡೆದ ಒಳಕಾಡು ವಾರ್ಡಿನ ಸಭೆಯಲ್ಲಿ, ಮಾಜಿ ಸಂಸದ ರಂಗನಾಥ ಶೆಣೈಯವರು ಉಡುಪಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದವರು ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಒಳಕಾಡು ವಾರ್ಡ್ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಹೆಬ್ಬಾರ್ ನೇತೃತ್ವದಲ್ಲಿ, ವಿಧಾನ ಸಭಾ ಚುನಾವಣೆ ಪೂರ್ವಭಾವಿಯಾಗಿ ಕಾಂಗ್ರೆಸ್ ಬ್ಲಾಕ್ ಮಟ್ಟದ ಕಾರ್ಯಕರ್ತರ ಸಭೆಯು ಲಕ್ಷಣ್ ಶೆಣೈ ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.
ಈ ಸಭೆಯಲ್ಲಿ ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಗಣೇಶ್ ನೆರ್ಗಿ,ಮಹಾಬಲ ಕುಂದರ್, ಸುರೇಶ್ ಬನ್ನಂಜೆ, ಸವಿತಾ ಶೆಣೈ, ಹಿರಿಯರು ಮತ್ತು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.