ಉಡುಪಿ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಇದೇ ಜ.22ರಂದು ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿರುವ ‘ಪ್ರಜಾಧ್ವನಿ ಯಾತ್ರೆ’ ಸಮಾವೇಶದ ಚಪ್ಪರ ನಿರ್ಮಾಣಕ್ಕೆ ಇಂದು ಚಾಲನೆ ನೀಡಲಾಯಿತು.
ಚಪ್ಪರ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ಸೊರಕೆ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ. ಬಿಜೆಪಿ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಅಧಿಕಾರವನ್ನು ಹಿಡಿಯುವ ಹುನ್ನಾರದಲ್ಲಿದೆ. ಈ ಬಗ್ಗೆ ಜನ ಸಾಮಾನ್ಯರು ತಮ್ಮ ಸ್ವರವನ್ನು ಎತ್ತಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್ ನಿಂದ ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ರಾಜ್ಯ ಸಂಯೋಜಕ ದಿನೇಶ್ ಪುತ್ರನ್, ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ , ಪ್ರಖ್ಯಾತ್ ಶೆಟ್ಟಿ , ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವೆರೋನಿಕಾ ಕರ್ನೇಲಿಯೋ, ರೋಷನಿ ಒಲಿವರ್, ಡಾ. ಸುನೀತಾ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಸುಹೇಲ್ ರಹಮತ್, ಶಬರೀಶ್ ಸುವರ್ಣ, ಜಯಸೇರಿಗಾರ್, ಕಾರ್ಕಳ ಮಹಮ್ಮದ್ ಇರ್ಷಾದ್, ಇಸ್ಮಾಯಿಲ್ ಆತ್ರಾಡಿ, ಜಯ ಕುಮಾರ್, ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಆನಂದ ಕಿದಿಯೂರು ,ಜೀತೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.