News Karnataka Kannada
Friday, May 17 2024
ಉಡುಪಿ

ಉಡುಪಿ: ಜೂನ್ 18ರಂದು ಆರೂರಿನಲ್ಲಿ ಗೋ ದತ್ತು ಸ್ವೀಕಾರ ಕಾರ್ಯಕ್ರಮ

Cow adoption programme to be held in Aroor on June 18
Photo Credit : News Kannada

ಉಡುಪಿ: ಪುಣ್ಯಕೋಟಿ ಗೋಸೇವಾ ಟ್ರಸ್ಟ್ ವತಿಯಿಂದ ಬ್ರಹ್ಮಾವರ ಬೆಳ್ಮಾರು- ಆರೂರಿನಲ್ಲಿ ಸ್ಥಾಪಿಸಲಾಗಿರುವ ಪುಣ್ಯಕೋಟಿ ಗೋಸೇವಾ ಕೇಂದ್ರದ ಪ್ರಾರಂಭೋತ್ಸವ ಹಾಗೂ ಗೋ ದತ್ತು ಸ್ವೀಕಾರ ಕಾರ್ಯಕ್ರಮ ಇದೇ ಜೂ.18ರಂದು ನಡೆಯಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ವಿಜಯ ಪ್ರಕಾಶ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಕೇಂದ್ರದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ದಾನಿಗಳಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮ ಕೂಡ ಜರಗಲಿದೆ. 11ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಾರ್ಷಿಕ 12ಸಾವಿರ ರೂ. ನೀಡಿ ಒಂದು ದನವನ್ನು ದತ್ತು ಸ್ವೀಕರಿಸುವ ದಾನಿಗಳಿಗೆ ಗೋ ದತ್ತು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಕರಾವಳಿಯ ಮೂಲ ತಳಿ ಮಲನಾಡು ಗಿಡ್ಡದ ಸಂರಕ್ಷಣೆ, ಸಂವರ್ಧನೆ ಹಾಗೂ ಈ ತಳಿಯ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಕೇಂದ್ರವನ್ನು ಆರಂಭಿಸಲಾಗಿದೆ. ಸದ್ಯಕ್ಕೆ ಈ ಕೇಂದ್ರದಲ್ಲಿ 70 ಮಲನಾಡು ಗಿಡ್ಡ ಗೋವುಗಳನ್ನು ಸಂರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು, ಕೇಂದ್ರದ ಕಾರ್ಯದರ್ಶಿ ನಳಿನಿ ಪ್ರದೀಪ್, ಸದಸ್ಯ ಪ್ರಸಾದ್ ಹಾವಂಜೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು