ಉಡುಪಿ: 40 ಅಡಿ ಆಳದ ಬಾವಿಗೆ ಬಿದ್ದ ಗೋವನ್ನು ರಕ್ಷಣೆ ಮಾಡಿದ ಘಟನೆ ಅಲೆವೂರಿನ ರಾಂಪುರದಲ್ಲಿ ಇಂದು ನಡೆದಿದೆ.
ಮೇಯಲು ಬಿಟ್ಟಿದ್ದ ಗಂಡು ಕರು, ಬಾವಿಯ ಬಳಿ ಸೊಪ್ಪು ತಿನ್ನಲು ಹೋಗಿದೆ. ಆಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯೊಳಗೆ ಬಿದ್ದಿದೆ.
ಇದನ್ನು ನೋಡಿದ ಸ್ಥಳೀಯರು ಸಮಾಜಿಕ ಕಾರ್ಯಕರ್ತ ಪ್ರಸಾದ್ ಪೂಜಾರಿ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪ್ರಸಾದ್ ಅವರು, ಮುಳುಗು ತಜ್ಞ ಅಶೋಕ್ ಶೆಟ್ಟಿ ದಂದೂರುಕಟ್ಟೆ ಮಾಹಿತಿ ನೀಡಿದರು. ಅದರಂತೆ ತಕ್ಷಣ ಸ್ಥಳಕ್ಕೆ ಬಂದ ಅಶೋಕ್ ಶೆಟ್ಟಿ ಅವರು ಬಾವಿಗಿಳಿದು ಕರು ಮುಳುಗದಂತೆ ಎತ್ತಿ ಹಿಡಿದರು. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಅಶೋಕ್ ಶೆಟ್ಟಿ ಅವರು ಸೇರಿಕೊಂಡು ಕರುವಿನ ನಾಲ್ಕು ಕಾಲುಗಳ ಮಧ್ಯೆ ಹಗ್ಗಕಟ್ಟಿ ಕರುವನ್ನು ಮೇಲಕ್ಕೆತ್ತಿದರು. ಸ್ಥಳೀಯರು ಕಾರ್ಯಾಚರಣೆಗೆ ಸಹಕಾರ ನೀಡಿದರು.
ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ…
ತಂದೆ ಮಗ ಒಂದೇ ದಿನ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ.
ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ…
ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ.
ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಉಪ್ಪು ತಿಂದವನು ನೀರು…
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಜಾಜಿನಗರ 6th ಬ್ಲಾಕ್ ನಲ್ಲಿ…