ಉಡುಪಿ: ಶಿರ್ವ ಮುಲ್ಕಿ ಸುಂದರರಾಮ್ ಶೆಟ್ಟಿ ಕಾಲೇಜಿನ ಪುರಾತತ್ವ ಇತಿಹಾಸ ವಿಭಾಗ ವತಿಯಿಂದ ಅಂತರಾಷ್ಟ್ರೀಯ ಕಲೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು, ಉಡುಪಿ ಪ್ರವಾಸೋದ್ಯಮ, ಅರಣ್ಯ ಇಲಾಖೆ, ಇಡೂರು-ಕುಂಜಾಡಿ ಗ್ರಾಪಂ ಆಶ್ರಯದಲ್ಲಿ ಅಂತರಾಷ್ಟ್ರೀಯ ಶಿಲಾಯುಗ ಬಂಡೆ ಚಿತ್ರಗಳ ಹಬ್ಬ (ರಾಕ್ ಆರ್ಟ್ ಫೆಸ್ಟಿವಲ್) ಇದೇ ಬರುವ ಡಿ. 26 ಮತ್ತು 27ರಂದು ಇಡೂರು-ಕುಂಜಾಡಿಯ ಸಮೀಪದ ಅವಲಕ್ಕಿಪಾರೆಯಲ್ಲಿ ನಡೆಯಲಿದೆ.
ಈ ಕುರಿತು ಉಡುಪಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ, ಪುರಾತತ್ವ ವಿದ್ವಾಂಸ ಪ್ರೊ. ಟಿ. ಮುರುಗೇಶಿ ಅವರು, ಮೂರು ವರ್ಷಗಳ ಹಿಂದೆಯೇ ಅವಲಕ್ಕಿಪಾರೆಯಲ್ಲಿ ಶಿಲಾಯುಗದ ಬಂಡೆ ಚಿತ್ರಗಳನ್ನು ಗುರುತಿಸಲಾಗಿತ್ತು. ಇದು ವನ್ಯಜೀವಿ ಸಂರಕ್ಷಿತ ಪ್ರದೇಶವಾಗಿದ್ದು, ಅರ್ಧ ಎಕರೆ ವಿಸ್ತೀರ್ಣದಲ್ಲಿ ಬಂಡೆ ಚಿತ್ರಗಳನ್ನು ಕಾಣಬಹುದಾಗಿದೆ ಎಂದರು.
ಇದೊಂದು ಅತ್ಯಂತ ವಿನೂತನ ಕಾರ್ಯಕ್ರಮ. ಪ್ರಸಿದ್ದ ಕಲಾ ಇತಿಹಾಸಕಾರ ಡಾ. ಇರ್ವಿನ್ ನ್ಯೂಮೇಯರ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಡಿ.26ರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ನಡೆಯಲಿದ್ದು, ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳಿಂದ ಪುರಾತತ್ವ ವಿದ್ವಾಂಸರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಆಸ್ಟ್ರೀಯಾದ ಕಲಾ ಇತಿಹಾಸಕಾರ ಡಾ. ಇರ್ವಿನ್ ನ್ಯೂಮೇಯರ್, ಸಂಶೋಧನಾ ವಿದ್ಯಾರ್ಥಿ ಕ್ರಿಸ್ಟೋಫರ್, ಕಾಲೇಜಿನ ಪುರಾತತ್ವ ವಿದ್ಯಾಾರ್ಥಿಗಳಾದ ವಿಶಾಲ್ ರೈ, ದಿಶಾಂತ್, ಅರುಣ್ ಇದ್ದರು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…