ಉಡುಪಿ: ಉಡುಪಿ ನಗರದ ಹೃದಯ ಭಾಗಗಳ ಮುಖ್ಯ ರಸ್ತೆಗಳು ಹಾಗೂ ಅವುಗಳಿಂದ ತಿರುವು ಪಡೆದ ರಸ್ತೆಗಳಲ್ಲಿ ಹೊಂಡ ಬಿದ್ದಿದ್ದು. ವಾಹನ ಸವಾರರಿಗೆ ಸಂಚರಿಸಲು ದುರ್ಗಮ ಪರಿಸ್ಥಿತಿ ಎದುರಾಗಿದೆ.
ದ್ವಿಚಕ್ರ ವಾಹನ ಸವಾರರು ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸುತ್ತಿವೆ. ಹೊರ ರಾಜ್ಯ, ಹೊರ ಜಿಲ್ಲೆಯ ಪ್ರವಾಸಿಗರು, ಯತ್ರಾರ್ಥಿಗಳು ಉಡುಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಇಲ್ಲಿಯ ರಸ್ತೆಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಬರುವ ತಿಂಗಳು ಅದ್ಧೂರಿಯ ಶ್ರೀಕೃಷ್ಣ ಮಠದ ಪರ್ಯಾಯಯೋತ್ಸವ ಕಾರ್ಯಕ್ರಮ ಇದ್ದು, ದೇಶ ವಿದೇಶದ ಭಕ್ತರು ಉಡುಪಿಗೆ ಆಗಮಿಸಲಿದ್ದಾರೆ. ಹಾಗಾಗಿ ಜಿಲ್ಲಾಡಳಿತ, ನಗರಾಡಳಿತ, ಜನಪ್ರತಿನಿಧಿಗಳು ತಕ್ಷಣ ರಸ್ತೆಯ ದುರಸ್ತಿ ಕಾಮಗಾರಿಗೆ ಚಾಲನೆ ನೀಡಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ. ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.