News Karnataka Kannada
Saturday, May 04 2024
ಉಡುಪಿ

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಕೆ. ಅಣ್ಣಾಮಲೈ ಭೇಟಿ: ಅದ್ಧೂರಿ ಸ್ವಾಗತ

Udupi district BJP office Annamalai's visit: Grand welcome
Photo Credit : News Kannada

ಉಡುಪಿ: ಜಿಲ್ಲಾ ಬಿಜೆಪಿ ಕಚೇರಿಗೆ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ಚುನಾವಣಾ ಸಹ ಉಸ್ತುವಾರಿಯಾಗಿರುವ ಕೆ. ಅಣ್ಣಾಮಲೈ ಅವರು ಭೇಟಿ ನೀಡಿದರು.

ಅಣ್ಣಾಮಲೈ ಅವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಹೂವಿನ ಹಾರಹಾಕಿ ಸ್ವಾಗತಿಸಿದರು. ಬಿಜೆಪಿ ಮಹಿಳಾ ಸದಸ್ಯರು ಆರತಿ ಬೆಳಗಿ, ಹಣೆಗೆ ಕುಂಕುಮ ಇಟ್ಟು ಅಣ್ಣಾಮಲೈ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಮುಖಂಡರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಕೆ. ಉದಯಕುಮಾರ್ ಶೆಟ್ಟಿ, ಸುಮಿತ್ರಾ ನಾಯಕ್, ನಯನ ಗಣೇಶ್ ಮೊದಲಾದವರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು