ಉಡುಪಿ: ಶುದ್ಧ ಕುಡಿಯುವ ನೀರಿನ ಬಾವಿಗಳ ನೀರು ಕುಲುಸಿತಗೊಂಡು, ಪರಿಸರದ ನಿವಾಸಿಗಳು ಅನಾರೋಗ್ಯಕ್ಕೆ ತುತ್ತಾಗಿರುವ ಘಟನೆ ಶಾರದ ಕಲ್ಯಾಣ ಮಂಟಪದ ಪರಿಸರದಲ್ಲಿ ನಡೆದಿದೆ. ರಸ್ತೆ ಕಾಮಗಾರಿಯ ಪರಿಣಾಮ ಈ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳಿಯರು ದೂರಿದ್ದಾರೆ.
ಶಾರದ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ರಸ್ತೆಯ ಕಾಮಗಾರಿ ನಡೆಯುವ ಸಂದರ್ಭ, ಕಾಂಕ್ರೀಟ್ ರಸ್ತೆಯನ್ನು ಜೆಸಿಬಿ ಯಂತ್ರಗಳ ಮೂಲಕ ಅಗೆಯಲಾಗಿದೆ. ಅಗೆಯುವ ಸಂದರ್ಭ ಡ್ರೈನೆಜ್ ಕೊಳವೆ ಒಡೆದು ಹೋಗಿವೆ. ಇದರ ಪರಿಣಾಮ ಪರಿಸರದ ಮನೆಗಳ ಬಾವಿಗಳಿಗೆ ತ್ಯಾಜ್ಯ ನೀರು ಸೇರಿಕೊಂಡು, ಶುದ್ಧ ನೀರು ಕಲುಸಿತಗೊಂಡಿದೆ. ಇಲ್ಲಿಯ ನಿವಾಸಿಗಳು ಬಾವಿ ನೀರು ಸೇವಿಸಿ, ವಾಂತಿ ಬೇಧಿ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಮುಂದೆ ಪರಿಸ್ಥಿತಿ ಮತ್ತಷ್ಟು ಬಿಗುಡಾಯಿಸುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…