News Karnataka Kannada
Saturday, May 04 2024
ಉಡುಪಿ

ಉಡುಪಿ: ಮರಳಿನ ರಾಶಿ ನಡುವೆ ಕೃಷಿ ಮಾಡಿದ ಕರಾವಳಿ ಕಾವಲು ಪೊಲೀಸ್ ಪಡೆ

Udupi: Fertile agriculture in sand heaps
Photo Credit : News Kannada

ಉಡುಪಿ: ಸುತ್ತ ಮರಳಿನ ರಾಶಿ, ಉಪ್ಪು ನೀರಿನ ಬಾಧೆ ಇದರ ಮಧ್ಯೆ ಫಲವತ್ತಾದ ಕೃಷಿ ಮಾಡುವ ಮೂಲಕ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಪಡೆ ಸೈ ಎನಿಸಿಕೊಂಡಿದೆ.

ಕರಾವಳಿ ಕಾವಲು ಪಡೆಯ ಪೊಲೀಸರು ಸಮುದ್ರ ತೀರದಲ್ಲಿ ಸುಮಾರು ಒಂದು ಎಕರೆ ಜಾಗದಲ್ಲಿ ತೋಟಗಾರಿಕೆ ಮತ್ತು ತರಕಾರಿ ಗಿಡಗಳನ್ನು ಬೆಳೆಯುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ತೆಂಗು, ಬಾಳೆ ಸಹಿತ ವಿವಿಧ ಜಾತಿಯ ಗಿಡಗಳನ್ನು ಬೆಳೆಯಲಾಗಿದ್ದು, ಇದೀಗ ಅವು ಸಮೃದ್ಧವಾಗಿ ಬೆಳೆದು ಫಲ ನೀಡುತ್ತೇವೆ. ಇದರೊಂದಿಗೆ ವಿವಿಧ ತರಕಾರಿ ಬೆಳೆದು ಮರಳಿನ ಪ್ರದೇಶದಲ್ಲಿ ಕೃಷಿ ಮಾಡಬಹುದು ಎಂಬುವುದನ್ನು ಪೊಲೀಸರು ತೋರಿಸಿಕೊಟ್ಟಿದ್ದಾರೆ.

ಕರಾವಳಿ ಕಾವಲು ಪಡೆಯ ಪೊಲೀಸರ ಕೃಷಿ ಕಾರ್ಯವನ್ನ ಸ್ವತಃ ಜಿಲ್ಲಾಧಿಕಾರಿ ಕೂರ್ಮರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಾವಳಿ ಕಾವಲು ಪೊಲೀಸ್ ಪಡೆಯ ಅಧೀಕ್ಷಕ ಅಬ್ಧುಲ್ ಅಹದ್ ಅವರ ಮುತುವರ್ಜಿಯಿಂದ ಇದರ ಮೇಲ್ವಿಚಾರಣೆ ನಡೆಸುತ್ತಿದೆ. ಕಾವಲು ಪಡೆಯ ಒಳಗೆ ಗೋ ಶಾಲೆ ಆರಂಭಿಸುವ ಮೂಲಕ ಗಮನ ಸೆಳೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು