ಉಡುಪಿ: ಜಿಲ್ಲಾ ನಾಟಕ ಕಲಾವಿದ ಒಕ್ಕೂಟದ ಪ್ರಥಮ ವಾರ್ಷಿಕೋತ್ಸವ ಸಂಭ್ರಮ “ರಂಗ ಸಂಗಮ” ಉಡುಪಿಯ ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಇಂದು ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮನ್ನು ಉದ್ಘಾಟಿಸಿ ಹಿರಿಯ ಕಲಾವಿದರನ್ನು ಗೌರವಿಸಿದರು. ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟದ ಅಧ್ಯಕ್ಷ ಲೀಲಾಧರ ಶೆಟ್ಟಿ, ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್, ಸಾಧು ಸಾಲ್ಯಾನ್, ಉಡುಪಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಸ್ಥಾಪಕ ವಿಶ್ವನಾಥ ಶೆಣೈ, ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಪಿ. ಪ್ರಭಾಕರ್ ಕಲ್ಯಾಣಿ ಉಪಸ್ಥಿತರಿದ್ದರು.