ಉಡುಪಿ: ಬೋಟ್ ನಿಂದ ಮೀನು ಖಾಲಿ ಮಾಡುತ್ತಿದ್ದ ವೇಳೆ ಮೀನುಗಾರನೋರ್ವ ಆಯತಪ್ಪಿ ನದಿಯ ನೀರಿಗೆ ಬಿದ್ದು ಮೃತಪಟ್ಟ ಘಟನೆ ಗಂಗೊಳ್ಳಿ ಬಂದರಿನ ಪಂಚಗಂಗಾವಳಿ ನದಿಯಲ್ಲಿ ನಡೆದಿದೆ.
ಮೃತ ಮೀನುಗಾರನನ್ನು ಒರಿಸ್ಸಾ ಮೂಲದ 32ವರ್ಷದ ಪ್ರಮೋದ ಮಿನ್ಜ್ ಎಂದು ಗುರುತಿಸಲಾಗಿದೆ. ಇವರು ಯಕ್ಷೇಶ್ವರಿ” ಬೋಟ್ ನಲ್ಲಿ ಮೀನುಗಾರನಾಗಿ ಕೆಲಸ ಮಾಡಿಕೊಂಡಿದ್ದರು. ಅದರಂತೆ ನ.30ರಂದು ಆಳಸಮುದ್ರ ಮೀನುಗಾರಿಕೆ ಮುಗಿಸಿಕೊಂಡು ಗಂಗೊಳ್ಳಿ ಬಂದರ ಬಳಿ ಪಂಚಗಂಗಾವಳಿ ನದಿಯಲ್ಲಿ ಬೋಟನ್ನು ನಿಲ್ಲಿಸಿ, ಬೋಟಿನಿಂದ ಮೀನನ್ನು ಖಾಲಿ ಮಾಡಲಾಗುತ್ತಿತ್ತು.
ಈ ವೇಳೆ ಪ್ರಮೋದ್ ಆಕಸ್ಮಿಕವಾಗಿ ಆಯಾತಪ್ಪಿ ಬೋಟ್ನಿಂದ ನದಿಯ ನೀರಿಗೆ ಬಿದ್ದು ಕಾಣೆಯಾಗಿದ್ದರು. ಇಂದು ಬೆಳಿಗ್ಗೆ ನದಿಯಲ್ಲಿ ಪ್ರಮೋದ್ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.