News Karnataka Kannada
Sunday, April 28 2024
ಉಡುಪಿ

ಉಡುಪಿ: ಏಕಕಾಲದಲ್ಲಿ ಐದು ಅನಾಥ ಶವಗಳ ಅಂತ್ಯಸಂಸ್ಕಾರ

Udupi: Five orphaned bodies cremated at the same time
Photo Credit : News Kannada

ಉಡುಪಿ: ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಹಾಗೂ ಪೋಲಿಸರು ಸೇರಿಕೊಂಡು ಒಮ್ಮೆಗೆ ವಾರಸುದಾರರಿಲ್ಲದ ಐದು ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರ ಭೂಮಿಯಲ್ಲಿ ಗೌರಯುತವಾಗಿ ನಡೆಸಿದರು.

ಒಳರೋಗಿಯಾಗಿ ದಾಖಲಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಅಪರಿಚಿತ ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಶವಗಳನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಡಲಾಗಿತ್ತು. ಮಾಧ್ಯಮ ಪ್ರಕಟಣೆ ನೀಡಿ ಕಾಲಮಿತಿ ಕಳೆದರೂ ಮೃತರ ವಾರಸುದಾರರು ಸಂಪರ್ಕಿಸದೆ ಇರುವುದರಿಂದ ಕಾನೂನಿನಂತೆ ಅಂತ್ಯಸಂಸ್ಕಾರ ನಡೆಸಲಾಯಿತು.

ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಕೇಶವ ಬಂಗೇರ ಗಂಗೊಳ್ಳಿ ಹೆಡ್ ಕಾನ್ಸ್ಟೇಬಲ್ ಕಾನೂನು ಪ್ರಕ್ರಿಯೆ ನಡೆಸಿದರು. ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು, ಪ್ರದೀಪ್, ರಾಮದಾಸ್ ಪಾಲನ್, ಸಾಜೀ ಕುಮಾರ್, ಮತ್ತಿತರರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು. ನಗರ ಸಭೆ, ಅಣ್ಣಪ್ಪ ಪೂಜಾರಿ, ವಿಷ್ಣು ಪ್ಲವರ್, ಉದಯ ಕುಮಾರ್ ಉದ್ಯಮಿ ಸಹಕಾರ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು