ಉಡುಪಿ: ಆಸರೆ ಚಾರಿಟೇಬಲ್ ಟ್ರಸ್ಟ್( ರಿ)ಕಡಿಯಾಳಿ ವತಿಯಿಂದ ಉಡುಪಿ ನಗರದ ಸುಬ್ರಹ್ಮಣ್ಯ ನಗರದಲ್ಲಿ 3 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಒದಗಿಸಲಾಯಿತು.
ಫಲಾನುಭವಿಗಳಾದ ಅಮಿತ, ಶೀಲಾ ಹಾಗೂ ಸದಾಶಿವ ಅವರ ಮನೆಗಳಿಗೆ ಕಲ್ಪಿಸಿರುವ ಉಚಿತ ವಿದ್ಯುತ್ ಸೌಲಭ್ಯವನ್ನು ನಗರಸಭೆ ಸ್ಥಾಯಿ ಸಮಿತಿ ಸದಸ್ಯ ಶ್ರೀಶ ಭಟ್ ಕೊಡವೂರು ಲೋಕಾರ್ಪಣೆ ಮಾಡಿದರು.
ಆಸರೆ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ ಮಾತನಾಡಿ, ಉಡುಪಿಯಲ್ಲಿ ದಾನಿಗಳ ಸಹಕಾರದಿಂದ 133 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ. ಈ ಮೂಲಕ ಉಡುಪಿ ಇಡೀ ದೇಶಕ್ಕೆ ಮಾದರಿಯಾಗಿದೆ. ಉಡುಪಿಯನ್ನು ಶೇಕಡಾ 100 ರಷ್ಟು ವಿದ್ಯುತ್ ಸಂಪರ್ಕವನ್ನಾಗಿ ಪರಿವರ್ತಿಸುವುದು ನಮ್ಮ ಗುರಿ, ಡಿಸೆಂಬರ್ ಮೊದಲು ಉಡುಪಿಯಲ್ಲಿರುವ ಮನೆಗಳಿಗೆ ಶೇಕಡಾ 100 ರಷ್ಟು ವಿದ್ಯುತ್ ಸಂಪರ್ಕವನ್ನು ನೀಡುವ ಗುರಿಯನ್ನು ನಾವು ಹೊಂದಿದ್ದೆವೆ ಎಂದರು.
ಮಾಜಿ ನಗರಸಭೆ ಸದಸ್ಯೆ ಸುಬೇಧಾ ಮಾತನಾಡಿ, ‘ಫಲಾನುಭವಿ ಶೀಲಾ ವಿದ್ಯುತ್ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸಿದ್ದರು. ಅಗತ್ಯ ದಾಖಲೆಗಳ ಕೊರತೆಯಿಂದ ಹೊಸ ಮನೆ ಕಟ್ಟಲು ಅವರಿಗೆ ಸಾಧ್ಯವಾಗಿಲ್ಲ. ವಿದ್ಯುತ್ ಸಂಪರ್ಕದಿಂದ ವಂಚಿತರಾಗಿರುವುದು ತಿಳಿದಾಗ ಪುರಸಭೆ ಸದಸ್ಯೆ ಜಯಂತಿ ಪೂಜಾರಿ ಅವರನ್ನು ಸಂಪರ್ಕಿಸಿದರು. ಅವರು ಆಸರೆ ಚಾರಿಟಬಲ್ ಟ್ರಸ್ಟ್ಗೆ ತಿಳಿಸಿ ಮತ್ತು ಟ್ರಸ್ಟ್ ನ ಮೂಲಕವಾಗಿ ವಿದ್ಯುತ್ ಸಂಪರ್ಕವನ್ನು ನೀಡಲಾಗಿದೆ. ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಾನಿಗಳಾದ ಮಂಜುಳಾ ವಿ ಶೆಣೈ, ವಲ್ಲಭ ಭಟ್ ಮಲ್ಪೆ, ನಗರಸಭಾ ಸದಸ್ಯೆ ಜಯಂತಿ ಪೂಜಾರಿ, ಆಶಾ ಭಟ್, ಆಸರೆ ಚಾರಿಟೇಬಲ್ ಟ್ರಸ್ಟ್ ಖಜಾಂಚಿ ಸತೀಶ್ ಕುಲಾಲ್, ರಾಕೇಶ್ ಜೋಗಿ, ವಿದ್ಯುತ್ ಸಂಪರ್ಕ ಕಲ್ಪಿಸಿದ ಮಂಜುನಾಥ್ ಎಲೆಕ್ಟ್ರಿಕಲ್ಸ್ ನ ನಾಗರಾಜ ಪ್ರಭು ಸ್ಥಳೀಯರಾದ ಅನಂತಮೂರ್ತಿ ಭಟ್, ಶ್ರೀನಿವಾಸರಾವ್, ಜಯಂತ್ ಜಯಂತ್ ಪೂಜಾರಿ , ರಾಜಾರಾಮ್ ಲಕ್ಷ್ಮಿ, ಸೌಮ್ಯಾ ಉಪಸ್ಥಿತರಿದ್ದರು.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.